ರಾಜ್ಯ

ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜು: ಆರ್.‌ಅಶೋಕ್‌

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜಾಗುತ್ತಿದ್ದು, ಮೊದಲು ಅವುಗಳನ್ನು ಮುಚ್ಚಿ ನಂತರ ಬೇಕಾದರೆ ಚಂದ್ರಲೋಕಕ್ಕೆ ಟನಲ್ ನಿರ್ಮಾಣ ಮಾಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರದ ಉದ್ದೇಶಿತ ಟನಲ್ ಯೋಜನೆಯನ್ನು ವಿರೋಧಿಸಿ ಲಾಲ್‍ಬಾಗ್‍ನಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳು ಮತ್ತಿತರರ ಜೊತೆ ಸಂವಾದ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನಗರದಲ್ಲಿ ಗುಂಡಿಗಳನ್ನು ಮುಚ್ಚಲು ಯೋಗ್ಯತೆ ಇಲ್ಲದ ಸರ್ಕಾರ ಟನಲ್ ನಿರ್ಮಾಣ ಮಾಡುತ್ತೇನೆಂದು ಬೊಗಳೆ ಬಿಡುತ್ತಿದೆ. ಒಂದು ಕಾಲದಲ್ಲಿ ಬೆಂಗಳೂರು ನಗರವನ್ನು ವಿಶ್ವವೇ ನೋಡುತ್ತಿತ್ತು. ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಉದ್ಯಮಿಗಳು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದು ಕರ್ನಾಟಕದ ಮತ್ತು ಕನ್ನಡಿಗರ ದೌರ್ಭಾಗ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಓದುಗರ ಪತ್ರ: ರಸ್ತೆ ಗುಂಡಿ ಮುಚ್ಚಲು ಕ್ರಮ ವಹಿಸಿ

ಮೊದಲು ಗುಂಡಿಗಳನ್ನು ಮುಚ್ಚಿ ಪ್ರತಿದಿನ ಆಗುತ್ತಿರುವ ರಸ್ತೆ ಅಪಘಾತಗಳನ್ನು ತಪ್ಪಿಸಿ. ಅಕ್ಟೋಬರ್ 30ರೊಳಗೆ ಗುಂಡಿಗಳನ್ನು ಮುಚ್ಚಬೇಕೆಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಡೆಡ್‍ಲೈನ್ ಮುಗಿದಿದ್ದರೂ ಡೆತ್‍ಗಳು ಮಾತ್ರ ಸಂಭವಿಸುತ್ತಲೇ ಇವೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದರು.

ಸಸ್ಯಕಾಶಿಗೆ ರಾಜ್ಯ ಸರ್ಕಾರ ಗುಂಡಿ ತೋಡುವ ಕೆಲಸ ಮಾಡುತ್ತಿದೆ. ಇದಕ್ಕೆ ವಿರೋಧವಾಗಿ ಬಿಜೆಪಿಯವರು ಸೇರಿದ್ದೇವೆ. ಸಾಕಷ್ಟು ಜನ ಬಂದಿದ್ದರು. ಮೌನವಾಗಿ ನಾವು ಪ್ರತಿಭಟನೆ ಮಾಡಿದ್ದೇವೆ. ಸುರಂಗ ಯೋಜನೆಯಿಂದ ಬೆಂಗಳೂರಿನ ಪರಿಸರ ಹಾಳಾಗುತ್ತದೆ. ಬೆಂಗಳೂರಿನ ಜನರು ನಿದ್ದೆಗೆಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದು ಟನಲ್ ರಸ್ತೆ ಅಲ್ಲ ವಿಐಪಿ ಕಾರಿಡಾರ್ ಆಗುತ್ತದೆ. ಶೇ.90ರಷ್ಟು ಬಡವರು, ಮಧ್ಯಮ ವರ್ಗದವರು ಬಳಸುವ ಬೈಕ್, ಸೈಕಲ್‍ಗೆ ಪ್ರವೇಶವಿಲ್ಲ. ಕೇವಲ ಕಾರಿಗೆ ಮಾತ್ರ ಪ್ರವೇಶವಿದೆ. ಹಾಗಾಗಿ ಇದು ವಿಐಪಿ ರಸ್ತೆ ಎಂದು ಆಕ್ಷೇಪಿಸಿದರು.

ಈ ಯೋಜನೆಗೆ 8 ಸಾವಿರ ಕೋಟಿ ಟೆಂಟರ್ ಕರೆದಿದ್ದಾರೆ. 4 ಸಾವಿರ ಕೋಟಿ ಪಾವತಿ ಮಾಡಬೇಕು. ಇದಕ್ಕಾಗಿ ಸಾಲ ಮಾಡಲು ಹೊರಟಿದ್ದಾರೆ. ಅದಕ್ಕೆ ಬಡ್ಡಿ ಎಲ್ಲಿಂದ ಕೊಡುತ್ತಾರೆ? ಆರ್ಥಿಕ ಪರಿಸ್ಥಿತಿಯನ್ನು ಪಾತಾಳಕ್ಕೆ ತಳ್ಳುವ ಯೋಜನೆ ಇದಾಗಿದೆ. ಭೂಮಿಯ ಆಳದಲ್ಲಿ ಮಾಡಲು ಹೊರಟ್ಟಿದ್ದಾರೆ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

4 mins ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

37 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

4 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

20 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

20 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

23 hours ago