ರಾಜ್ಯ

ಬ್ಯಾಂಕ್‌ ದರೋಡೆ ಪ್ರಕರಣ | ಬಂಧನಕ್ಕೆ 7 ವಿಶೇಷ ತಂಡ ರಚನೆ

ವಿಜಯಪುರ : ಏಕಾಏಕಿ ಬ್ಯಾಂಕಿಗೆ ನುಗ್ಗಿ ಪಿಸ್ತೂಲ್ ತೋರಿಸಿ, ಸಿಬ್ಬಂದಿಗಳ ಕೈಕಾಲು ಕಟ್ಟಿ ಸಿನಿಮಾ ಶೈಲಿಯಲ್ಲಿ 23 ಕೋಟಿ ರೂ.ಮೌಲ್ಯದ ಚಿನ್ನಾಭರಣ ಹಾಗೂ 1.4 ಕೋಟಿ ರೂ.ನಗದು ದೋಚಿ ಪರಾರಿಯಾಗಿರುವ ಮುಸುಕುದಾರಿ ದರೋಡೆಕೋರರ ಬಂಧನಕ್ಕೆ ಏಳು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ನಿನ್ನೆ ಸಂಜೆ 6 ಗಂಟೆ ಸುಮಾರಿನಲ್ಲಿ ಬ್ಯಾಂಕ್ ಮುಚ್ಚುವ ವೇಳೆಗೆ ಠೇವಣಿ ಫಾರಂ ಕೇಳುವ ನೆಪ ಮಾಡಿಕೊಂಡು ಬ್ಯಾಂಕಿಗೆ ಒಬ್ಬ ದರೋಡೆಕೋರ ಕರಿಬಣ್ಣದ ಕೋವಿಡ್ ಮಾಸ್ಕ್, ಬಿಳಿ ಬಣ್ಣದ ಟೋಪಿ ಹಾಗೂ ಕನ್ನಡಕ ಹಾಕಿಕೊಂಡು ಒಳನುಗ್ಗಿದ ನಂತರ ಒಬ್ಬೊಬ್ಬರಾಗಿ ಮೂವರು ಒಳನುಸುಳಿದ ಮುಸುಕುದಾರಿ ದರೋಡೆಕೋರರ ತಂಡ ಏಕಾಏಕಿ ಪಿಸ್ತೂಲ್ ಹೊರ ತೆಗೆದು ಬ್ಯಾಂಕ್ ಸಿಬ್ಬಂದಿಗಳನ್ನು ಬೆದರಿಸಿದರು.

ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ಏನಾಗುತ್ತಿದೆ ಎಂದು ಯೋಚಿಸುವಷ್ಟರಲ್ಲಿ ದರೋಡೆಕೋರರು ಅವರ ಪ್ಲಾಸ್ಟಿಕ್ ಟ್ಯಾಗ್‍ನಿಂದ ಕೈಕಾಲು ಕಟ್ಟಿಹಾಕಿ ತಿಜೋರಿಯಲ್ಲಿದ್ದ ಸುಮಾರು 23,61,78,460 ರೂ.ಮೌಲ್ಯದ 20 ಕೆಜಿ ಚಿನ್ನಾಭರಣ ಹಾಗೂ 1.4 ಕೋಟಿ ಹಣವನ್ನು ಬ್ಯಾಗ್‍ನಲ್ಲಿ ತುಂಬಿಸಿಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಬ್ಯಾಂಕ್ ದರೋಡೆ ಮಾಡಿ ಪರಾರಿಯಾಗಿರುವ ದರೋಡೆಕೋರರ ಹೆಡೆಮುರಿ ಕಟ್ಟಲು ವಿಶೇಷ ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿದೆ. ಏಕಕಾಲಕ್ಕೆ ಕಾರ್ಯಾಚರಣೆಗೆ ಇಳಿದಿರುವ ಈ ಏಳು ವಿಶೇಷ ಪೊಲೀಸರ ತಂಡಗಳು ಈಗಾಗಲೇ ಮಹಾರಾಷ್ಟ್ರ ಹಾಗೂ ಮತ್ತಿತರ ರಾಜ್ಯಗಳಿಗೆ ಭೇಟಿ ನೀಡಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿವೆ. ದರೋಡೆಕೋರರು ಬ್ಯಾಂಕ್ ದರೋಡೆಗೆ ಬಳಸಿದ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಬಳಿ ಪತ್ತೆಯಾಗಿದ್ದು, ಅವರು ಕಾರಿನಲ್ಲಿ ಪರಾರಿಯಾಗುತ್ತಿದ್ದ ವೇಳೆ ಮಂಗಳವೆಡೆ ತಾಲ್ಲೂಕಿನ ಹುಲಜಂತಿ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದಿದ್ದರಿಂದ ತಮ್ಮ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿರುವುದು ಗೊತ್ತಾಗಿದೆ.

ಈ ಜಾಡು ಹಿಡಿದಿರುವ ವಿಶೇಷ ಪೊಲೀಸ್ ತಂಡಗಳು ನಾಲ್ಕು ದಿಕ್ಕುಗಳಿಗೂ ಸಂಚರಿಸಿ ದರೋಡೆಕೋರರ ಬಂಧನಕ್ಕೆ ಜಾಲ ಬೀಸಿದ್ದಾರೆ. ದರೋಡೆಕೋರರ ಬಗ್ಗೆ ಖಚಿತ ಮಾಹಿತಿ ದೊರೆತಿದ್ದು, ಆದಷ್ಟು ಬೇಗ ಅವರನ್ನು ಬಂಧಿಸಲಾಗುವುದೆಂದು ಉತ್ತರ ವಲಯ ಐಜಿಪಿ ಚೇತನ್‍ಸಿಂಗ್ ರಾಥೋಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

32 mins ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

4 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

5 hours ago