ರಾಜ್ಯ

ಕೇಂದ್ರದ ವಿರುದ್ದ ಬ್ಯಾಂಕ್‌ ನಿವೃತ್ತರ ಒಕ್ಕೂಟಗಳ ಪ್ರತಿಭಟನೆ

ಬೆಂಗಳೂರು : ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ನಗರದ ಫ್ರೀಡಂ ಪಾರ್ಕ್ ನಲ್ಲಿಂದು(ಮಾ.29) ಬೃಹತ್ ಪ್ರತಿಭಟನೆ ನಡೆಸಿತು.

ಬ್ಯಾಂಕ್ ನಿವೃತ್ತರ ಸಂಯುಕ್ತ ವೇದಿಕೆಯು” ದೇಶದ ಸುಮಾರು ಏಳು ಬ್ಯಾಂಕ್ ನಿವೃತ್ತರ ಸಂಘಟನೆಗಳ ಒಂದು ರಾಷ್ಟ್ರೀಯ ಬೃಹತ್ ಸಂಘಟನೆಯಾಗಿದೆ. ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟ, ಅಖಿಲ ಭಾರತ ನಿವೃತ್ತ ಬ್ಯಾಂಕ್ ನಿವೃತ್ತರ ಸಂಘ, ಫೋರಂ ಆಫ್ ರಿಟೈರ್ಡ್ ಬ್ಯಾಂಕ್ ಎಂಪ್ಲಾಯೀಸ್, ವಾಣಿಜ್ಯ ಬ್ಯಾಂಕ್ ಗಳ ನಿವೃತ್ತರ ಸಂಘ, ರಿಟೈರ್ಡ್ ಬ್ಯಾಂಕ್ ಆಫೀಸರ್ಸ್ ಕಾನ್ಫಡರೇಷನ್, ಬ್ಯಾಂಕ್ ರ್ಸ್ ಡಿಸರ್ವ್ ಜಸ್ಟಿಸ್ ಸೊಸೈಟಿ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ನ ಗುಂಪುಗಳ ನಿವೃತ್ತರ ಸಂಘಟನೆಗಳು ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾದರು.

“ಸಂಯುಕ್ತ ವೇದಿಕೆ”ಯ ಸಂಚಾಲಕರಾದ ಎಸ್.ಸಿ ಜೈನ್ ಮಾತನಾಡಿ, 1995 ರಿಂದ ಬಾಕಿ ಇರುವ ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆ, ವಿಶೇಷ ಭತ್ಯೆಗಳ ಮೇಲೆ ಪಿಂಚಣಿ ನೀಡುವ, ಖಾಸಗಿ ಬ್ಯಾಂಕ್ ನಿವೃತ್ತರಿಗೂ ಎಕ್ಸ್ ಗ್ರೇಶಿಯಾ ಕೊಡುವ, ಅರೋಗ್ಯ ವಿಮೆಯ ಸುಧಾರಣೆ ಮತ್ತು ಅರೋಗ್ಯ ವಿಮೆಯ ಮೇಲಿನ ಜಿ. ಎಸ್. ಟಿಯಿಂದ ಸಂಪೂರ್ಣ ವಿನಾಯತಿ ನೀಡುವ, ವಾಣಿಜ್ಯ ಬ್ಯಾಂಕುಗಳ ಪಿಂಚಣಿದಾರರಿಗೆ ಆಗುತ್ತಿರುವ ತಾರತಮ್ಯ ತಪ್ಪಿಸುವ ಜೊತೆಗೆ ಬ್ಯಾಂಕ್ ಉದ್ಯೋಗಕ್ಕೆ ರಾಜೀನಾಮೆ ನೀಡಿದವರಿಗೂ ಆದಷ್ಟು ಬೇಗ ಪಿಂಚಣಿ ನೀಡುವಲ್ಲಿ ಆಗುತ್ತಿರುವ ತೊಂದರೆಯನ್ನು ಬಗೆಹರಿಸಬೇಕು ಎಂದರು.

ಒಕ್ಕೂಟದ ಜಂಟಿ ಪ್ರಧಾನ ಕಾರ್ಯದರ್ಶಿ ಕೆ. ವಿಶ್ವನಾಥ ನಾಯ್ಕ್ ಮಾತನಾಡಿ, ಬ್ಯಾಂಕ್ ನಿವೃತ್ತರ ಬೇಡಿಕೆಗಳ ಬಗ್ಗೆ ಚರ್ಚಿಸಲು ನೇರವಾಗಿ ಬ್ಯಾಂಕ್ ನಿವೃತ್ತರ ಸಂಘಟನೆಗಳ ನಾಯಕರನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆದು ಮಾತನಾಡಬೇಕು. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು. ಇಲ್ಲವಾದಲ್ಲಿ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಎ.ಆರ್.ಬಿ.ಇ.ಎ ಪ್ರಧಾನ ಕಾರ್ಯದರ್ಶಿ ಸಿ.ಎನ್. ಪ್ರಸಾದ್, ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಸಂಘಟನೆಗಳ ಸಂಯುಕ್ತ ವೇದಿಕೆಯ ಸಂಚಾಲಕ ಗಿರಿರಾಜ್ ಮತ್ತಿತರರು ಉಪಸ್ಥಿತರಿದ್ದರು.

AddThis Website Tools
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಮೇ.2ರಿಂದ ಪಂಚಾಯ್ತಿ ಮಟ್ಟದಲ್ಲಿ ಬೇಸಿಗೆ ಶಿಬಿರ ; ಇಲ್ಲಿವೆ ವಿಶೇಷತೆಗಳು

ಮಂಡ್ಯ : ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಶ್ರಾಯದಲ್ಲಿ ಮೇ.2 ರಿಂದ 26 ರವರೆಗೆ 3 ರಿಂದ…

1 hour ago

IPL 2025 | ಪಂತ್‌ ಮೇಲೆ ಸೇಡು ತೀರಿಸಿಕೊಂಡ ಹಾರ್ದಿಕ್‌; ಲಖೌನ್‌ ಗೆದ್ದ ಮುಂಬೈ

ಮುಂಬೈ : ವೇಗಿ ಜಸ್‌ಪ್ರಿತ್‌ ಬುಮ್ರಾ ಅವರ ಮಾರಕ ದಾಳಿಗೆ ನಲುಗಿದ ಲಖನೌ ಸೂಪರ್‌ ಜೈಂಟ್ಸ್‌ ತಂಡ, ಮುಂಬೈ ಇಂಡಿಯನ್ಸ್‌…

1 hour ago

Pahalgam Terrassit attack ; ತನಿಖೆ ಚುರುಕುಗೊಳಿಸಿದ ಎನ್‌ಐಎ

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿದ್ದು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು…

1 hour ago

ಕಬಡ್ಡಿ ಪಂದ್ಯದ ವೇಳೆ ಗ್ಯಾಲರಿ ಕುಸಿತ ; ಓರ್ವ ಸಾವು, 13 ಮಂದಿಗೆ ಗಾಯ

ಮಂಡ್ಯ: ಕಬಡ್ಡಿ ಪಂದ್ಯಾವಳಿ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವನ್ನಪ್ಪಿ, ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡಿರುವ ಘಟನೆ…

1 hour ago

ಗಾಂಜಾ ಪ್ರಕರಣ ; ಮಲಯಾಳಂ ಇಬ್ಬರು ನಿರ್ದೇಶಕರ ಬಂಧನ

ಕೊಚ್ಚಿ: ಮಲಯಾಳಂ ಚಿತ್ರರಂಗಕ್ಕೆ ಮಾದಕ ವಸ್ತುಗಳು ತಸು ಗಟ್ಟಿಯಾಗಿಯೇ ಅಂಟಿದಂತಿದೆ. ಸತತವಾಗಿ ಒಬ್ಬರ ಮೇಲೆಬ್ಬರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ…

1 hour ago

ಅಂಬೇಡ್ಕರ್‌ಗೆ ಅಪಮಾನ : ನಾಳೆ ಮೈಸೂರಲ್ಲಿ ಬೃಹತ್‌ ಪ್ರತಿಭಟನೆ

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಏ.29ರಂದು…

1 hour ago