ರಾಜ್ಯ

ಕೇಂದ್ರದ ವಿರುದ್ದ ಬ್ಯಾಂಕ್‌ ನಿವೃತ್ತರ ಒಕ್ಕೂಟಗಳ ಪ್ರತಿಭಟನೆ

ಬೆಂಗಳೂರು : ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ನಗರದ ಫ್ರೀಡಂ ಪಾರ್ಕ್ ನಲ್ಲಿಂದು(ಮಾ.29) ಬೃಹತ್ ಪ್ರತಿಭಟನೆ ನಡೆಸಿತು.

ಬ್ಯಾಂಕ್ ನಿವೃತ್ತರ ಸಂಯುಕ್ತ ವೇದಿಕೆಯು” ದೇಶದ ಸುಮಾರು ಏಳು ಬ್ಯಾಂಕ್ ನಿವೃತ್ತರ ಸಂಘಟನೆಗಳ ಒಂದು ರಾಷ್ಟ್ರೀಯ ಬೃಹತ್ ಸಂಘಟನೆಯಾಗಿದೆ. ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟ, ಅಖಿಲ ಭಾರತ ನಿವೃತ್ತ ಬ್ಯಾಂಕ್ ನಿವೃತ್ತರ ಸಂಘ, ಫೋರಂ ಆಫ್ ರಿಟೈರ್ಡ್ ಬ್ಯಾಂಕ್ ಎಂಪ್ಲಾಯೀಸ್, ವಾಣಿಜ್ಯ ಬ್ಯಾಂಕ್ ಗಳ ನಿವೃತ್ತರ ಸಂಘ, ರಿಟೈರ್ಡ್ ಬ್ಯಾಂಕ್ ಆಫೀಸರ್ಸ್ ಕಾನ್ಫಡರೇಷನ್, ಬ್ಯಾಂಕ್ ರ್ಸ್ ಡಿಸರ್ವ್ ಜಸ್ಟಿಸ್ ಸೊಸೈಟಿ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ನ ಗುಂಪುಗಳ ನಿವೃತ್ತರ ಸಂಘಟನೆಗಳು ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾದರು.

“ಸಂಯುಕ್ತ ವೇದಿಕೆ”ಯ ಸಂಚಾಲಕರಾದ ಎಸ್.ಸಿ ಜೈನ್ ಮಾತನಾಡಿ, 1995 ರಿಂದ ಬಾಕಿ ಇರುವ ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆ, ವಿಶೇಷ ಭತ್ಯೆಗಳ ಮೇಲೆ ಪಿಂಚಣಿ ನೀಡುವ, ಖಾಸಗಿ ಬ್ಯಾಂಕ್ ನಿವೃತ್ತರಿಗೂ ಎಕ್ಸ್ ಗ್ರೇಶಿಯಾ ಕೊಡುವ, ಅರೋಗ್ಯ ವಿಮೆಯ ಸುಧಾರಣೆ ಮತ್ತು ಅರೋಗ್ಯ ವಿಮೆಯ ಮೇಲಿನ ಜಿ. ಎಸ್. ಟಿಯಿಂದ ಸಂಪೂರ್ಣ ವಿನಾಯತಿ ನೀಡುವ, ವಾಣಿಜ್ಯ ಬ್ಯಾಂಕುಗಳ ಪಿಂಚಣಿದಾರರಿಗೆ ಆಗುತ್ತಿರುವ ತಾರತಮ್ಯ ತಪ್ಪಿಸುವ ಜೊತೆಗೆ ಬ್ಯಾಂಕ್ ಉದ್ಯೋಗಕ್ಕೆ ರಾಜೀನಾಮೆ ನೀಡಿದವರಿಗೂ ಆದಷ್ಟು ಬೇಗ ಪಿಂಚಣಿ ನೀಡುವಲ್ಲಿ ಆಗುತ್ತಿರುವ ತೊಂದರೆಯನ್ನು ಬಗೆಹರಿಸಬೇಕು ಎಂದರು.

ಒಕ್ಕೂಟದ ಜಂಟಿ ಪ್ರಧಾನ ಕಾರ್ಯದರ್ಶಿ ಕೆ. ವಿಶ್ವನಾಥ ನಾಯ್ಕ್ ಮಾತನಾಡಿ, ಬ್ಯಾಂಕ್ ನಿವೃತ್ತರ ಬೇಡಿಕೆಗಳ ಬಗ್ಗೆ ಚರ್ಚಿಸಲು ನೇರವಾಗಿ ಬ್ಯಾಂಕ್ ನಿವೃತ್ತರ ಸಂಘಟನೆಗಳ ನಾಯಕರನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆದು ಮಾತನಾಡಬೇಕು. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು. ಇಲ್ಲವಾದಲ್ಲಿ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಎ.ಆರ್.ಬಿ.ಇ.ಎ ಪ್ರಧಾನ ಕಾರ್ಯದರ್ಶಿ ಸಿ.ಎನ್. ಪ್ರಸಾದ್, ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಸಂಘಟನೆಗಳ ಸಂಯುಕ್ತ ವೇದಿಕೆಯ ಸಂಚಾಲಕ ಗಿರಿರಾಜ್ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

6 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

6 hours ago

ಬೊಮ್ಮನದೊಡ್ಡಿ ಬಳಿ ಚಿರತೆ ಸಂಚಾರ: ಗ್ರಾಮಸ್ಥರಲ್ಲಿ ಆತಂಕ

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…

6 hours ago

ಕೇರಳದಲ್ಲಿ ಭಾರೀ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…

7 hours ago

ಅಣ್ಣಾಮಲೈ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನಗೊಂಡಿದೆ. ರಾಜ್ಯ…

8 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್‌ ಪಡೆಯಲು ಒಪ್ಪಿದ್ದಾರೆ: ರಣದೀಪ್‌ ಸಿಂಗ್‌ ಸುರ್ಜೇವಾಲ

ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್‌ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌…

8 hours ago