Mysore
16
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟ: ಸಿಎಂ ಸಿದ್ದರಾಮಯ್ಯ ಭಾಗಿ?

kn rajanna

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ-ನವೆಂಬರ್ ಕ್ರಾಂತಿ ಭಾರೀ ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಮಾಜಿ ಸಚಿವ ರಾಜಣ್ಣ ಮನೆಯಲ್ಲಿನ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗುತ್ತಿರುವುದು ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಗ್ರಾಮೀಣ ಪ್ರದೇಶದ ಬಿದರಕಟ್ಟೆಯಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಲಿದ್ದು, ನಂತರ ತುಮಕೂರಿನಲ್ಲಿ ಕ್ಯಾನ್ಸರ್ ಚಿಕಿತ್ಸಾಲಯವನ್ನು ಉದ್ಘಾಟಿಸಲಿದ್ದಾರೆ.

ಇದನ್ನು ಓದಿ: ಬಿಜೆಪಿ ಶಾಸಕರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿ ಬಗ್ಗೆ ಇಂದೇ ವಿಚಾರಿಸುವೆ: ಬಿ.ವೈ.ವಿಜಯೇಂದ್ರ

ಇದರ ಬೆನ್ನಲ್ಲೇ ರಾಜಣ್ಣ ಅವರ ಮನೆಯಲ್ಲಿ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಅವರೂ ಕೂಡ ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆಂದು.ಔತಣಕೂಟದಲ್ಲಿ ಸಿದ್ದರಾಮಯ್ಯ ಅವರು, ರಾಜಣ್ಣ ಅವರನ್ನು ಸಂಪುಟಕ್ಕೆ ಮರಳಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆ ನಡೆಸಬಹುದು.

ಈ ನಡುವೆ ನವೆಂಬರ್.15ರಂದು ಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನರ್‌ರಚನೆಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

Tags:
error: Content is protected !!