ರಾಜ್ಯ

ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟ: ಸಿಎಂ ಸಿದ್ದರಾಮಯ್ಯ ಭಾಗಿ?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ-ನವೆಂಬರ್ ಕ್ರಾಂತಿ ಭಾರೀ ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಮಾಜಿ ಸಚಿವ ರಾಜಣ್ಣ ಮನೆಯಲ್ಲಿನ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗುತ್ತಿರುವುದು ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಗ್ರಾಮೀಣ ಪ್ರದೇಶದ ಬಿದರಕಟ್ಟೆಯಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಲಿದ್ದು, ನಂತರ ತುಮಕೂರಿನಲ್ಲಿ ಕ್ಯಾನ್ಸರ್ ಚಿಕಿತ್ಸಾಲಯವನ್ನು ಉದ್ಘಾಟಿಸಲಿದ್ದಾರೆ.

ಇದನ್ನು ಓದಿ: ಬಿಜೆಪಿ ಶಾಸಕರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿ ಬಗ್ಗೆ ಇಂದೇ ವಿಚಾರಿಸುವೆ: ಬಿ.ವೈ.ವಿಜಯೇಂದ್ರ

ಇದರ ಬೆನ್ನಲ್ಲೇ ರಾಜಣ್ಣ ಅವರ ಮನೆಯಲ್ಲಿ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಅವರೂ ಕೂಡ ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆಂದು.ಔತಣಕೂಟದಲ್ಲಿ ಸಿದ್ದರಾಮಯ್ಯ ಅವರು, ರಾಜಣ್ಣ ಅವರನ್ನು ಸಂಪುಟಕ್ಕೆ ಮರಳಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆ ನಡೆಸಬಹುದು.

ಈ ನಡುವೆ ನವೆಂಬರ್.15ರಂದು ಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನರ್‌ರಚನೆಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

14 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

14 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

19 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago