kn rajanna
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ-ನವೆಂಬರ್ ಕ್ರಾಂತಿ ಭಾರೀ ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಮಾಜಿ ಸಚಿವ ರಾಜಣ್ಣ ಮನೆಯಲ್ಲಿನ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗುತ್ತಿರುವುದು ಕುತೂಹಲ ಹೆಚ್ಚಾಗುವಂತೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಗ್ರಾಮೀಣ ಪ್ರದೇಶದ ಬಿದರಕಟ್ಟೆಯಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಲಿದ್ದು, ನಂತರ ತುಮಕೂರಿನಲ್ಲಿ ಕ್ಯಾನ್ಸರ್ ಚಿಕಿತ್ಸಾಲಯವನ್ನು ಉದ್ಘಾಟಿಸಲಿದ್ದಾರೆ.
ಇದನ್ನು ಓದಿ: ಬಿಜೆಪಿ ಶಾಸಕರು ಕಾಂಗ್ರೆಸ್ ಔತಣಕೂಟದಲ್ಲಿ ಭಾಗಿ ಬಗ್ಗೆ ಇಂದೇ ವಿಚಾರಿಸುವೆ: ಬಿ.ವೈ.ವಿಜಯೇಂದ್ರ
ಇದರ ಬೆನ್ನಲ್ಲೇ ರಾಜಣ್ಣ ಅವರ ಮನೆಯಲ್ಲಿ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಅವರೂ ಕೂಡ ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆಂದು.ಔತಣಕೂಟದಲ್ಲಿ ಸಿದ್ದರಾಮಯ್ಯ ಅವರು, ರಾಜಣ್ಣ ಅವರನ್ನು ಸಂಪುಟಕ್ಕೆ ಮರಳಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆ ನಡೆಸಬಹುದು.
ಈ ನಡುವೆ ನವೆಂಬರ್.15ರಂದು ಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನರ್ರಚನೆಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…