ರಾಜ್ಯ

ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ : ಸಿಎಂ ಭರವಸೆ

ಉಡುಪಿ : ಬಂಟ ಸಮುದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿ, ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಸಮುದಾಯವು ವಿಶಿಷ್ಟ ಸಂಸ್ಕೃತಿ, ಪರಂಪರೆ ಹೊಂದಿದ್ದು, ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡುತ್ತಿದೆ. ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಂಟರು ಸೇರಿ ಮಂಗಳೂರು, ಉಡುಪಿ ಜಿಲ್ಲೆಯವರು ಉದ್ಯಮ ಸಾಹಸಿಗಳು. ವಿಶ್ವದ ಎಲ್ಲಾ ಕಡೆ ಹರಡಿದ್ದು, ತಾವು ಹೋಗುವ ಎಲ್ಲಾ ಕಡೆ ಜನರ ಬೆರೆತು, ಸಹೃದಯತೆಯಿಂದ ಬಾಳುತ್ತಾರೆ. ಇದು ಬಂಟರ ಸಮುದಾಯದ ಹೆಗ್ಗಳಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡೆ, ಸಿನಿಮಾ, ಶಿಕ್ಷಣ, ಹೋಟೆಲ್ ಉದ್ಯಮ ಸೇರಿ ಎಲ್ಲಾ ಕ್ಷೇತ್ರಗಳಲ್ಲೂ ಬಂಟರು ತಮ್ಮ ಛಾಪು ಮೂಡಿಸಿದ್ದಾರೆ. ಎಲ್ಲೇ ಹೋದರೂ ತಮ್ಮ ಭಾಷೆ, ಸಂಸ್ಕೃತಿಯನ್ನು ಪಸರಿಸುತ್ತಾರೆ. ತುಳು ಮೇಲಿನ ನಿಮ್ಮ ಪ್ರೀತಿ ಮತ್ತು ಅಕ್ಕರೆ ಅನುಕರಣೀಯ. ಇದು ಹೆಮ್ಮೆಯ ವಿಚಾರ. ಪ್ರತಿಯೊಬ್ಬರು ಅವರವರ ಮಾತೃಭಾಷೆಗೆ ಗೌರವ ಕೊಡುವುದರಿಂದ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಹೆಚ್ಚಿಸುತ್ತದೆ ಎಂದರು.

ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ ಎಂದರು.‌

lokesh

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago