ರಾಜ್ಯ

ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ : ಸಿಎಂ ಭರವಸೆ

ಉಡುಪಿ : ಬಂಟ ಸಮುದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿ, ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಸಮುದಾಯವು ವಿಶಿಷ್ಟ ಸಂಸ್ಕೃತಿ, ಪರಂಪರೆ ಹೊಂದಿದ್ದು, ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡುತ್ತಿದೆ. ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಂಟರು ಸೇರಿ ಮಂಗಳೂರು, ಉಡುಪಿ ಜಿಲ್ಲೆಯವರು ಉದ್ಯಮ ಸಾಹಸಿಗಳು. ವಿಶ್ವದ ಎಲ್ಲಾ ಕಡೆ ಹರಡಿದ್ದು, ತಾವು ಹೋಗುವ ಎಲ್ಲಾ ಕಡೆ ಜನರ ಬೆರೆತು, ಸಹೃದಯತೆಯಿಂದ ಬಾಳುತ್ತಾರೆ. ಇದು ಬಂಟರ ಸಮುದಾಯದ ಹೆಗ್ಗಳಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡೆ, ಸಿನಿಮಾ, ಶಿಕ್ಷಣ, ಹೋಟೆಲ್ ಉದ್ಯಮ ಸೇರಿ ಎಲ್ಲಾ ಕ್ಷೇತ್ರಗಳಲ್ಲೂ ಬಂಟರು ತಮ್ಮ ಛಾಪು ಮೂಡಿಸಿದ್ದಾರೆ. ಎಲ್ಲೇ ಹೋದರೂ ತಮ್ಮ ಭಾಷೆ, ಸಂಸ್ಕೃತಿಯನ್ನು ಪಸರಿಸುತ್ತಾರೆ. ತುಳು ಮೇಲಿನ ನಿಮ್ಮ ಪ್ರೀತಿ ಮತ್ತು ಅಕ್ಕರೆ ಅನುಕರಣೀಯ. ಇದು ಹೆಮ್ಮೆಯ ವಿಚಾರ. ಪ್ರತಿಯೊಬ್ಬರು ಅವರವರ ಮಾತೃಭಾಷೆಗೆ ಗೌರವ ಕೊಡುವುದರಿಂದ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಹೆಚ್ಚಿಸುತ್ತದೆ ಎಂದರು.

ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ ಎಂದರು.‌

lokesh

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

10 mins ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

1 hour ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

2 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

2 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

2 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

3 hours ago