ರಾಜ್ಯ

ಬಾನು ಮುಷ್ತಾಕ್‌ ಇಡೀ ದೇಶಕ್ಕೆ ಕಿರೀಟವಾಗಿದ್ದಾರೆ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ಮೈಸೂರು ದಸರಾವನ್ನು ಬೂಕರ್‌ ಪ್ರಶಸ್ತಿ ವಿಜೇತ ಬಾನುಮುಷ್ತಾಕ್‌ ಉದ್ಘಾಟಿಸುವುದನ್ನು ವಿರೋಧಿಸುವುದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನುಮುಷ್ತಾಕ್‌ ಇಡೀ ದೇಶಕ್ಕೆ ಕಿರೀಟವಾಗಿದ್ದಾರೆ. ಅವರನ್ನು ಪ್ರತ್ಯೇಕವಾಗಿ ನೋಡುತ್ತಿರುವುದು ಏಕೆ? ದೇಶಕ್ಕೆ, ಕನ್ನಡ ನಾಡಿಗೆ ಗೌರವ ತಂದುಕೊಟ್ಟ ಅವರು ನಾಡಹಬ್ಬದ ಉದ್ಘಾಟನೆಗೆ ಆಯ್ಕೆಯಾಗಿದ್ದಾರೆ. ವಿರೋಧಿಸುವವರಿಗೆ ಏನೆಂದು ಹೇಳಲು ಸಾಧ್ಯ ಎಂದರು.

ಸಂವಿಧಾನದ ಪೀಠಿಕೆಯ ಪ್ರಕಾರ ಧಾರ್ಮಿಕವಾಗಿ, ಸಾಮಾಜಿಕವಾಗಿ ಎಲ್ಲರೂ ಒಂದೇ. ದಸರಾ ಸಾಂಸ್ಕೃತಿಕ ಜೀವನ ಅಭಿವ್ಯಕ್ತಿಗೊಳಿಸುವ ಹಬ್ಬ. ಇದು ಧರ್ಮದ ಆಚರಣೆಯಲ್ಲ, ಧರ್ಮದ ವಿಚಾರ ಜನರಿಗೆ ಬಿಟ್ಟದ್ದು ಎಂದರು.

ನಾಡ ಹಬ್ಬಕ್ಕೆ ಸರ್ವರೂ ಸಹಭಾಗಿಗಳು. ಈಶ್ವರ್‌ ಅಲ್ಲಾ ತೇರೆನಾಮ್‌ ಎಂದು ಹೇಳಿಕೊಂಡು ಬಂದಿದ್ದೇವೆ. ಬಕ್ರೀದ್‌ ಸಂಭ್ರಮದಲ್ಲಿ ನಾವೂ ಭಾಗಿಯಾಗಿದ್ದೇವೆ. ನಾಡಿನ ಸಾಂಸ್ಕೃತಿಕ ವಿಚಾರದಲ್ಲೂ ರಾಜಕೀಯ ಮಾಡುವುದೇಕೆ? ಸಂವಿಧಾನ ಬದ್ಧವಾಗಿಯೇ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಲಾಗಿದೆ. ಮರುಪರಿಶೀಲಿಸುವ ಅಗತ್ಯವೇ ಇಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

4 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

4 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

6 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

7 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

7 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

8 hours ago