ರಾಜ್ಯ

ಬಾನು ಮುಷ್ತಾಕ್‌ ಇಡೀ ದೇಶಕ್ಕೆ ಕಿರೀಟವಾಗಿದ್ದಾರೆ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ಮೈಸೂರು ದಸರಾವನ್ನು ಬೂಕರ್‌ ಪ್ರಶಸ್ತಿ ವಿಜೇತ ಬಾನುಮುಷ್ತಾಕ್‌ ಉದ್ಘಾಟಿಸುವುದನ್ನು ವಿರೋಧಿಸುವುದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನುಮುಷ್ತಾಕ್‌ ಇಡೀ ದೇಶಕ್ಕೆ ಕಿರೀಟವಾಗಿದ್ದಾರೆ. ಅವರನ್ನು ಪ್ರತ್ಯೇಕವಾಗಿ ನೋಡುತ್ತಿರುವುದು ಏಕೆ? ದೇಶಕ್ಕೆ, ಕನ್ನಡ ನಾಡಿಗೆ ಗೌರವ ತಂದುಕೊಟ್ಟ ಅವರು ನಾಡಹಬ್ಬದ ಉದ್ಘಾಟನೆಗೆ ಆಯ್ಕೆಯಾಗಿದ್ದಾರೆ. ವಿರೋಧಿಸುವವರಿಗೆ ಏನೆಂದು ಹೇಳಲು ಸಾಧ್ಯ ಎಂದರು.

ಸಂವಿಧಾನದ ಪೀಠಿಕೆಯ ಪ್ರಕಾರ ಧಾರ್ಮಿಕವಾಗಿ, ಸಾಮಾಜಿಕವಾಗಿ ಎಲ್ಲರೂ ಒಂದೇ. ದಸರಾ ಸಾಂಸ್ಕೃತಿಕ ಜೀವನ ಅಭಿವ್ಯಕ್ತಿಗೊಳಿಸುವ ಹಬ್ಬ. ಇದು ಧರ್ಮದ ಆಚರಣೆಯಲ್ಲ, ಧರ್ಮದ ವಿಚಾರ ಜನರಿಗೆ ಬಿಟ್ಟದ್ದು ಎಂದರು.

ನಾಡ ಹಬ್ಬಕ್ಕೆ ಸರ್ವರೂ ಸಹಭಾಗಿಗಳು. ಈಶ್ವರ್‌ ಅಲ್ಲಾ ತೇರೆನಾಮ್‌ ಎಂದು ಹೇಳಿಕೊಂಡು ಬಂದಿದ್ದೇವೆ. ಬಕ್ರೀದ್‌ ಸಂಭ್ರಮದಲ್ಲಿ ನಾವೂ ಭಾಗಿಯಾಗಿದ್ದೇವೆ. ನಾಡಿನ ಸಾಂಸ್ಕೃತಿಕ ವಿಚಾರದಲ್ಲೂ ರಾಜಕೀಯ ಮಾಡುವುದೇಕೆ? ಸಂವಿಧಾನ ಬದ್ಧವಾಗಿಯೇ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಲಾಗಿದೆ. ಮರುಪರಿಶೀಲಿಸುವ ಅಗತ್ಯವೇ ಇಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

43 mins ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

48 mins ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

57 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago