mahadevappa
ಬೆಂಗಳೂರು: ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತ ಬಾನುಮುಷ್ತಾಕ್ ಉದ್ಘಾಟಿಸುವುದನ್ನು ವಿರೋಧಿಸುವುದು ಸರಿಯಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನುಮುಷ್ತಾಕ್ ಇಡೀ ದೇಶಕ್ಕೆ ಕಿರೀಟವಾಗಿದ್ದಾರೆ. ಅವರನ್ನು ಪ್ರತ್ಯೇಕವಾಗಿ ನೋಡುತ್ತಿರುವುದು ಏಕೆ? ದೇಶಕ್ಕೆ, ಕನ್ನಡ ನಾಡಿಗೆ ಗೌರವ ತಂದುಕೊಟ್ಟ ಅವರು ನಾಡಹಬ್ಬದ ಉದ್ಘಾಟನೆಗೆ ಆಯ್ಕೆಯಾಗಿದ್ದಾರೆ. ವಿರೋಧಿಸುವವರಿಗೆ ಏನೆಂದು ಹೇಳಲು ಸಾಧ್ಯ ಎಂದರು.
ಸಂವಿಧಾನದ ಪೀಠಿಕೆಯ ಪ್ರಕಾರ ಧಾರ್ಮಿಕವಾಗಿ, ಸಾಮಾಜಿಕವಾಗಿ ಎಲ್ಲರೂ ಒಂದೇ. ದಸರಾ ಸಾಂಸ್ಕೃತಿಕ ಜೀವನ ಅಭಿವ್ಯಕ್ತಿಗೊಳಿಸುವ ಹಬ್ಬ. ಇದು ಧರ್ಮದ ಆಚರಣೆಯಲ್ಲ, ಧರ್ಮದ ವಿಚಾರ ಜನರಿಗೆ ಬಿಟ್ಟದ್ದು ಎಂದರು.
ನಾಡ ಹಬ್ಬಕ್ಕೆ ಸರ್ವರೂ ಸಹಭಾಗಿಗಳು. ಈಶ್ವರ್ ಅಲ್ಲಾ ತೇರೆನಾಮ್ ಎಂದು ಹೇಳಿಕೊಂಡು ಬಂದಿದ್ದೇವೆ. ಬಕ್ರೀದ್ ಸಂಭ್ರಮದಲ್ಲಿ ನಾವೂ ಭಾಗಿಯಾಗಿದ್ದೇವೆ. ನಾಡಿನ ಸಾಂಸ್ಕೃತಿಕ ವಿಚಾರದಲ್ಲೂ ರಾಜಕೀಯ ಮಾಡುವುದೇಕೆ? ಸಂವಿಧಾನ ಬದ್ಧವಾಗಿಯೇ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮರುಪರಿಶೀಲಿಸುವ ಅಗತ್ಯವೇ ಇಲ್ಲ ಎಂದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…