ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಹೆಸರು ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೆಸರು ಘೋಷಣೆ ಮಾಡಿದ್ದಾರೆ. ಬಾನು ಮುಷ್ತಾಕ್ ಅವರು ಹಿಂದೂ ಪರಂಪರೆ, ಹಿಂದೂ ಆಚಾರ ವಿಚಾರಗಳ ಮೇಲೆ ನಂಬಿಕೆ ಇಟ್ಟು ಬಂದರೆ ಸ್ವಾಗತ ಮಾಡುತ್ತೇವೆ. ಬಾನು ಮುಷ್ತಾಕ್ ಹಾಗೂ ಕೊಡಗಿನ ದೀಪಾ ಬಸ್ತಿ ಇಬ್ಬರಿಗೂ ಸೇರಿ ಬೂಕರ್ ಪ್ರಶಸ್ತಿ ಬಂದಿದೆ. ಆದರೆ, ಸರ್ಕಾರ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮಾತ್ರ ಕರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೀಪಾ ಬಸ್ತಿ ಅವರನ್ನು ಏಕೆ ಕರೆದಿಲ್ಲ? ಎಂದು ಪ್ರಶ್ನೆ ಮಾಡಿದರು.
ದೀಪಾ ಬಸ್ತಿ ಅವರನ್ನು ಏಕೆ ಕರೆಯಬೇಕು ಎಂಬ ಆಲೋಚನೆ ಸರ್ಕಾರಕ್ಕೆ ಬಂದಿಲ್ಲ? ಕೊಡಗಿನ ಬಗ್ಗೆ ಸಿಎಂಗೆ ಆಸಕ್ತಿ ಕಡಿಮೆ. ದಸರಾ ಧಾರ್ಮಿಕ ಸಂಪ್ರದಾಯ ಒಳಗೊಂಡ ಕಾರ್ಯಕ್ರಮ. ನಮಗೆ ಆಚಾರ ವಿಚಾರ, ಸಂಪ್ರದಾಯ ಎಲ್ಲವೂ ಗೊತ್ತಿದೆ ಎಂದು ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…