ಬೆಂಗಳೂರು: ಬಾಣಂತಿಯರ ಸರಣಿ ಸಾವುಗಳ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ್ಯಾಂತ ಆಕ್ರೋಶ ವ್ಯಕ್ತವಾದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ, ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿದೆ.
ಈ ಎರಡು ಇಲಾಖೆಯನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸ ಮರುನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ-ಪಂಗಡಗಳ ಸಮುದಾಯದ ಜೊತೆಗೆ ಬಡವರ ಮೇಲಿನ ಆರೋಗ್ಯದ ದೃಷ್ಠಿಯಿಂದ ಹೆಚ್ಚು ವೆಚ್ಚ ತಗುಲುವ ಕಾಯಿಲೆಗಳಿಗೆ ಸೇವೆ ಒದಗಿಸಲು 45 ಕೋಟಿಯನ್ನು ಸರ್ಕಾರ ಮೀಸಲಿಟ್ಟಿದೆ.
ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಾದ ಬಾಣಂತಿಯರ ಸರಣಿ ಸಾವಿಗೆ ಇಡೀ ರಾಜ್ಯವೇ ನಲುಗಿತ್ತು. ಬೆಳಗಾವಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೇವಲ ಆರು ತಿಂಗಳಲ್ಲಿ 322 ಶಿಶುಗಳು ಮತ್ತು 29 ಬಾಣಂತಿಯರು ಮೃತಪಟ್ಟಿದ್ದರು. ಅಲ್ಲದೇ, ರಾಯಚೂರಿನಲ್ಲೂ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…