ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಹೋರಾಟ ಮಾಡಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಜ್ಜಾಗಿದ್ದಾರೆ.
ಕರ್ನಾಟಕ ಬಿಜೆಪಿ ಮೇಲೆ ಹಿಡಿತ ಸಾಧಿಸುವ ಜೊತೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅಂಡ್ ಟೀಂ ಹೊಸ ಬಾಂಬ್ ಸಿಡಿಸಲು ಸಜ್ಜಾಗಿದ್ದು, ಬೆಳಗಾವಿಯಲ್ಲೇ ವಿಜಯೇಂದ್ರ ವಿರುದ್ಧ ಹೋರಾಟ ಮಾಡಲು ರೆಡಿಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಜಂಟಿ ಪಾದಯಾತ್ರೆ ಮುಗಿಸಿರುವ ಬಿಜೆಪಿ ಹಾಗೂ ಜೆಡಿಎಸ್ಗೆ ಈಗ ಮತ್ತೊಂದು ಕಂಟಕ ಎದುರಾಗಿದೆ.
ಪಾದಯಾತ್ರೆಯಲ್ಲಿ ಭಾಗವಹಿಸದೇ ದೂರ ಉಳಿದಿರುವ ರಮೇಶ್ ಜಾರಕಿಹೊಳಿ ಹಾಗೂ ಯತ್ನಾಳ್ ಹೊಸ ಬಾಂಬ್ ಸಿಡಿಸಲು ಸಜ್ಜಾಗಿದ್ದಾರೆ.
ಇದರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರೇ ಟಾರ್ಗೆಟ್ ಆಗಿದ್ದು, ಅವರಿಬ್ಬರ ವಿರುದ್ಧ ಹೊಸ ರಣತಂತ್ರ ರೂಪಿಸಲಾಗಿದೆ ಎನ್ನಲಾಗಿದೆ.
ರಾಜ್ಯಾಧ್ಯಕ್ಷ ಹುದ್ದೆಯನ್ನು ವಿಜಯೇಂದ್ರಗೆ ಕೊಟ್ಟ ಬಳಿಕ ಬಿಜೆಪಿ ನಾಯಕರಲ್ಲೇ ಅಸಮಾಧಾನ ಭುಗಿಲೆದ್ದಿದ್ದು, ಈಗ ಅದು ಇನ್ನಷ್ಟು ಹೆಚ್ಚಾಗುತ್ತಾ ಹೋಗಿದೆ.
ಇದರ ಜೊತೆ ಜೊತೆಗೆ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧವೂ ರೆಬೆಲ್ ಶಾಸಕರು ಅಸಮಾಧಾನ ಹೊರಹಾಕಿದ್ದು, ಬಿಜೆಪಿಯಲ್ಲಿ ಭಾರೀ ಬದಲಾವಣೆಯ ಗಾಳಿ ಬೀಸಲಿದೆ ಎನ್ನಲಾಗುತ್ತಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…