ರಾಜ್ಯ

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮೂಲತಃ ಲಿಂಗಾಯತರಲ್ಲ: ಶಾಸಕ ಯತ್ನಾಳ್‌

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮೂಲತಃ: ಲಿಂಗಾಯತರಲ್ಲ, ಅವರೊಬ್ಬರೂ ಬಳೆಗಾರ ಶೆಟ್ಟರು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.‌4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಾನು ವೀರಶೈವ ಲಿಂಗಾಯತರೆಂದು ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾರೆ. ಅವರು ಲಿಂಗಾಯತ ಅಲ್ಲ, ಬಿಜೆಪಿಯ ಬ್ಲ್ಯಾಕ್‌ ಮೇಲರ್‌ ಆಗಿದ್ದಾರೆ. ನಾವು ವೀರಶೈವ ಲಿಂಗಾಯತರಿಗೆ, ಬಿಎಸ್‌ವೈ ಕರೆದ ಯಾವ ಸಭೆಗಳಿಗೆ ಹೋಗಬೇಡಿ ಎಂದು ಹೇಳುತ್ತೇವೆ. ಆದರೆ ಅವರು ಅದನ್ನು ಕೇಳದೆ ಸಭೆಗಳಲ್ಲಿ ಭಾಗವಹಿಸುತ್ತಾರೆ ಎಂದರು.

ಯಡಿಯೂರಪ್ಪ ಅವರು ರಾಜ್ಯದ ವೀರಶೈವ ಲಿಂಗಾಯತರು ಹಾಗೂ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಪಕ್ಷದ ಬ್ಲಾಕ್ ಮೇಲರ್ ಆದರೆ ಯಡಿಯೂರಪ್ಪ ಬಿಜೆಪಿಯ ಬ್ಲಾಕ್ ಮೇಲರ್‌ ಆಗಿದ್ದಾರೆ. ಅವರೊಬ್ಬರು ಬಳೆಗಾರ ಶೆಟ್ಟರು ಯಾವುದೋ ಬೇರೆ ಕುಟುಂಬದವರಾಗಿದ್ದಾರೆ. ಮೂಲತಃ ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಬೂಕನಕೆರೆ ಆಗಿದೆ. ಅಲ್ಲಿಗೆ ಹೋಗಿ ಕೇಳಿದರೆ, ಅವರು ಯಾವ ಸಮುದಾಯ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

36 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago