ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಪಾಕಿಸ್ತಾನದ ಮೇಲೆ ಯುದ್ದ ಸಾರುವ ಅಗತ್ಯವಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಿಎಂ ಆಗಿ, ಭಾರತದ ಪ್ರಜೆಯಾಗಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದರೂ ಅವರು ಹೀಗೆ ಹೇಳುತ್ತಾರೆ. ಹಾಗಾದ್ರೆ ಸಿದ್ದರಾಮಯ್ಯಗೆ ಹಿಂದೂಗಳು ವೋಟ್ ಹಾಕಿಲ್ವಾ ಎಂದು ಪ್ರಶ್ನೆ ಮಾಡಿದರು.
ಯುದ್ಧ ಬೇಕು, ಬೇಡ ಎಂಬುದು ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಚಾರವಲ್ಲ. ಅದನ್ನು ಪ್ರಧಾನಿ, ರಾಷ್ಟ್ರಪತಿ ಹಾಗೂ ಸೈನ್ಯ ನಿರ್ಧಾರ ಮಾಡುತ್ತದೆ. ದೇಶಕ್ಕೆ ಆಪತ್ತು ಬಂದಾಗ ಈ ರೀತಿ ಮಾತನಾಡೋದು ಸರಿಯಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.





