ರಾಜ್ಯ

ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ: ಕಳೆಕಟ್ಟಿದ ಬುಲ್‌ಟೆಂಪಲ್‌ ರೋಡ್‌

ಬೆಂಗಳೂರು: ಇಂದಿನಿಂದ 5ದಿನಗಳ ಕಾಲ ವಿಶ್ವ ವಿಖ್ಯಾತ ಬಸವನಗುಡಿ ಕಡಲಡಕಾಯಿ ಪರಿಷೆ ನಡೆಯಲಿದ್ದು, ನಗರದ ದೊಡ್ಡಗಣಪತಿ ರಸ್ತೆಯಲ್ಲಿ ಬೇರೆ ರಾಜ್ಯಗಳನ್ನೂ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕಡಲೆಕಾಯಿ ಬೆಳೆಗಾರರು ರಾಶಿ ರಾಶಿ ಕಾಡಲೆಕಾಯಿಯೊಂದಿಗೆ ಬೀಡುಬಿಟ್ಟಿದ್ದಾರೆ.

ಸೋಮವಾರ ದೊಡ್ಡಗಣಪತಿ ಕಡಲೆಕಾಯಿಂದ ಅಭಿಷೇಕ ಮಾಡುವ ಮೂಲಕ ರಾಜ್ಯ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಕಡಲೆಕಾಯಿ ಪರಿಷೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಈಗಾಗಲೆ ಸುಮಾರು 200 ಜನ ರೈತರು, 20ಕ್ಕು ಹೆಚ್ಚು ಬಗೆಯ ಕಡಲೆಕಾಯಿಗಳ ಅಂಗಡಿಗಳನ್ನು ಇಟ್ಟಿದ್ದಾರೆ. ಈ ಬಾರಿಯ ಪರಿಷೆಗೆ ಸುಮಾರು 5-6ಲಕ್ಷ ಮಂದಿ ಭಾಗವಹಿಸುಯವ ನಿರೀಕ್ಷೆ ಇದ್ದು ದೇವಸ್ಥಾನದ ಸುತ್ತಾ ಹಾಗೂ ಬುಲ್‌ ಟೆಂಪಲ್‌ ರಸ್ತೆ ಉದ್ದಕ್ಕು ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಎಲ್ಲೆಡೆ ಸಿಸಿಟಿವಿ ಅಳವಡಿಸಲಾಗಿದೆ.

 ೨ದಿನದ ಮುಂಚೆಯೇ ಜಾತ್ರೆ ಕಳೆ:
ಡಿ. 11 ಸೋಮವಾರದಂದು ಬಸವನಗುಡಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ದೊರಕಲಿದೆ. ಆದರೆ ಈ ಬಾರಿ ಎರಡು ದಿನದ ಮುಂಚೆಯೇ ದೊಡ್ಡ ಗಣಪತಿ ದೇವಾಲಯ ಇರುವ ಬುಲ್‌ ಟೆಂಪಲ್‌ ರಸ್ತೆಯಲ್ಲಿ ಜಾತ್ರೆಯ ಪ್ರಾರಂಬವಾಗಿದೆ. ರಸ್ತೆಯ ಪಕ್ಕದಲ್ಲಿ ವಿವಿಧೆಡೆಯಿಂದ ಬಂದಿರುವ ಕಡಲೆಕಾಯಿ ವ್ಯಾಪಾರಿಗಳು ಬಿರುಸಿನ ವ್ಯಾಪಾರದಲ್ಲಿ ತೊಡಗಿದ್ದಾರೆ.

ಪ್ಲಾಸ್ಟಿಕ್‌ ಬಳಕೆ ನಿರ್ಬಂಧ:

ಈ ಬಾರಿಯ ಕಡಲೆಕಾಯಿ ಪರಿಷೆಯಲ್ಲಿ ಸಂಪೂರ್ಣ ಪ್ಲಾಸ್ಟಿಕ್‌ ಮುಕ್ತ ಮಾಡಲು ಸರ್ಕಾರ ಹಾಗೂ ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಈಗಾಗಲೆ ಎಲ್ಲೆಡೆ ಸೂಚನೆಗಳನ್ನು ನೀಡಲಾಗಿದೆ. ಕಡಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈಚೀಲ ತನ್ನಿ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.

andolanait

Recent Posts

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

39 mins ago

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

8 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

9 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

9 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

9 hours ago