ಬೆಂಗಳೂರು: ಇಂದಿನಿಂದ 5ದಿನಗಳ ಕಾಲ ವಿಶ್ವ ವಿಖ್ಯಾತ ಬಸವನಗುಡಿ ಕಡಲಡಕಾಯಿ ಪರಿಷೆ ನಡೆಯಲಿದ್ದು, ನಗರದ ದೊಡ್ಡಗಣಪತಿ ರಸ್ತೆಯಲ್ಲಿ ಬೇರೆ ರಾಜ್ಯಗಳನ್ನೂ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕಡಲೆಕಾಯಿ ಬೆಳೆಗಾರರು ರಾಶಿ ರಾಶಿ ಕಾಡಲೆಕಾಯಿಯೊಂದಿಗೆ ಬೀಡುಬಿಟ್ಟಿದ್ದಾರೆ.
ಸೋಮವಾರ ದೊಡ್ಡಗಣಪತಿ ಕಡಲೆಕಾಯಿಂದ ಅಭಿಷೇಕ ಮಾಡುವ ಮೂಲಕ ರಾಜ್ಯ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಕಡಲೆಕಾಯಿ ಪರಿಷೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಈಗಾಗಲೆ ಸುಮಾರು 200 ಜನ ರೈತರು, 20ಕ್ಕು ಹೆಚ್ಚು ಬಗೆಯ ಕಡಲೆಕಾಯಿಗಳ ಅಂಗಡಿಗಳನ್ನು ಇಟ್ಟಿದ್ದಾರೆ. ಈ ಬಾರಿಯ ಪರಿಷೆಗೆ ಸುಮಾರು 5-6ಲಕ್ಷ ಮಂದಿ ಭಾಗವಹಿಸುಯವ ನಿರೀಕ್ಷೆ ಇದ್ದು ದೇವಸ್ಥಾನದ ಸುತ್ತಾ ಹಾಗೂ ಬುಲ್ ಟೆಂಪಲ್ ರಸ್ತೆ ಉದ್ದಕ್ಕು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಎಲ್ಲೆಡೆ ಸಿಸಿಟಿವಿ ಅಳವಡಿಸಲಾಗಿದೆ.
೨ದಿನದ ಮುಂಚೆಯೇ ಜಾತ್ರೆ ಕಳೆ:
ಡಿ. 11 ಸೋಮವಾರದಂದು ಬಸವನಗುಡಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ದೊರಕಲಿದೆ. ಆದರೆ ಈ ಬಾರಿ ಎರಡು ದಿನದ ಮುಂಚೆಯೇ ದೊಡ್ಡ ಗಣಪತಿ ದೇವಾಲಯ ಇರುವ ಬುಲ್ ಟೆಂಪಲ್ ರಸ್ತೆಯಲ್ಲಿ ಜಾತ್ರೆಯ ಪ್ರಾರಂಬವಾಗಿದೆ. ರಸ್ತೆಯ ಪಕ್ಕದಲ್ಲಿ ವಿವಿಧೆಡೆಯಿಂದ ಬಂದಿರುವ ಕಡಲೆಕಾಯಿ ವ್ಯಾಪಾರಿಗಳು ಬಿರುಸಿನ ವ್ಯಾಪಾರದಲ್ಲಿ ತೊಡಗಿದ್ದಾರೆ.
ಪ್ಲಾಸ್ಟಿಕ್ ಬಳಕೆ ನಿರ್ಬಂಧ:
ಈ ಬಾರಿಯ ಕಡಲೆಕಾಯಿ ಪರಿಷೆಯಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಮಾಡಲು ಸರ್ಕಾರ ಹಾಗೂ ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಈಗಾಗಲೆ ಎಲ್ಲೆಡೆ ಸೂಚನೆಗಳನ್ನು ನೀಡಲಾಗಿದೆ. ಕಡಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈಚೀಲ ತನ್ನಿ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…