ರಾಜ್ಯ

ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ: ಕಳೆಕಟ್ಟಿದ ಬುಲ್‌ಟೆಂಪಲ್‌ ರೋಡ್‌

ಬೆಂಗಳೂರು: ಇಂದಿನಿಂದ 5ದಿನಗಳ ಕಾಲ ವಿಶ್ವ ವಿಖ್ಯಾತ ಬಸವನಗುಡಿ ಕಡಲಡಕಾಯಿ ಪರಿಷೆ ನಡೆಯಲಿದ್ದು, ನಗರದ ದೊಡ್ಡಗಣಪತಿ ರಸ್ತೆಯಲ್ಲಿ ಬೇರೆ ರಾಜ್ಯಗಳನ್ನೂ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕಡಲೆಕಾಯಿ ಬೆಳೆಗಾರರು ರಾಶಿ ರಾಶಿ ಕಾಡಲೆಕಾಯಿಯೊಂದಿಗೆ ಬೀಡುಬಿಟ್ಟಿದ್ದಾರೆ.

ಸೋಮವಾರ ದೊಡ್ಡಗಣಪತಿ ಕಡಲೆಕಾಯಿಂದ ಅಭಿಷೇಕ ಮಾಡುವ ಮೂಲಕ ರಾಜ್ಯ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಕಡಲೆಕಾಯಿ ಪರಿಷೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಈಗಾಗಲೆ ಸುಮಾರು 200 ಜನ ರೈತರು, 20ಕ್ಕು ಹೆಚ್ಚು ಬಗೆಯ ಕಡಲೆಕಾಯಿಗಳ ಅಂಗಡಿಗಳನ್ನು ಇಟ್ಟಿದ್ದಾರೆ. ಈ ಬಾರಿಯ ಪರಿಷೆಗೆ ಸುಮಾರು 5-6ಲಕ್ಷ ಮಂದಿ ಭಾಗವಹಿಸುಯವ ನಿರೀಕ್ಷೆ ಇದ್ದು ದೇವಸ್ಥಾನದ ಸುತ್ತಾ ಹಾಗೂ ಬುಲ್‌ ಟೆಂಪಲ್‌ ರಸ್ತೆ ಉದ್ದಕ್ಕು ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಎಲ್ಲೆಡೆ ಸಿಸಿಟಿವಿ ಅಳವಡಿಸಲಾಗಿದೆ.

 ೨ದಿನದ ಮುಂಚೆಯೇ ಜಾತ್ರೆ ಕಳೆ:
ಡಿ. 11 ಸೋಮವಾರದಂದು ಬಸವನಗುಡಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ದೊರಕಲಿದೆ. ಆದರೆ ಈ ಬಾರಿ ಎರಡು ದಿನದ ಮುಂಚೆಯೇ ದೊಡ್ಡ ಗಣಪತಿ ದೇವಾಲಯ ಇರುವ ಬುಲ್‌ ಟೆಂಪಲ್‌ ರಸ್ತೆಯಲ್ಲಿ ಜಾತ್ರೆಯ ಪ್ರಾರಂಬವಾಗಿದೆ. ರಸ್ತೆಯ ಪಕ್ಕದಲ್ಲಿ ವಿವಿಧೆಡೆಯಿಂದ ಬಂದಿರುವ ಕಡಲೆಕಾಯಿ ವ್ಯಾಪಾರಿಗಳು ಬಿರುಸಿನ ವ್ಯಾಪಾರದಲ್ಲಿ ತೊಡಗಿದ್ದಾರೆ.

ಪ್ಲಾಸ್ಟಿಕ್‌ ಬಳಕೆ ನಿರ್ಬಂಧ:

ಈ ಬಾರಿಯ ಕಡಲೆಕಾಯಿ ಪರಿಷೆಯಲ್ಲಿ ಸಂಪೂರ್ಣ ಪ್ಲಾಸ್ಟಿಕ್‌ ಮುಕ್ತ ಮಾಡಲು ಸರ್ಕಾರ ಹಾಗೂ ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಈಗಾಗಲೆ ಎಲ್ಲೆಡೆ ಸೂಚನೆಗಳನ್ನು ನೀಡಲಾಗಿದೆ. ಕಡಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈಚೀಲ ತನ್ನಿ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago