ರಾಜ್ಯ

ಶಿಗ್ಗಾಂವಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ಶನಿವಾರ (ಜೂನ್‌.15) ರಾಜೀನಾಮೆ ನೀಡಿದರು.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ತಮ್ಮ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭಾಧ್ಯಕ್ಷ ಯುಟಿ ಖಾದರ್‌ ಅವರನ್ನು ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಸ್ಪೀಕರ್‌ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸತತ ನಾಲ್ಕು ಬಾರಿ ಜಯಗಳಿಸಿದ್ದ ಅವರು ಸಿಎಂ ಆಗಿಯೂ ಅಧಿಕಾರ ಪಡೆದಿದ್ದರು. ಇದೇ ಮೊದಲ ಬಾರಿಗೆ ಹಾವೇರಿ-ಗದಗದಿಂದ ಸ್ಪರ್ಧೇ ಮಾಡಿದ್ದ ಬೊಮ್ಮಾಯಿ ಕಾಂಗ್ರೆಸ್‌ ಪಕ್ಷದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ 43 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿ ಲೋಕಸಭೆಗೆ ಎಂಟ್ರಿ ಕೊಟ್ಟಿದ್ದಾರೆ.

ಇನ್ನು ಹಾವೇರಿ-ಗದಗ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬೊಮ್ಮಾಯಿ 7,05,538 ಮತ ಪಡೆದರೆ, ಆನಂದಸ್ವಾಮಿ 6,62,025 ಮತ ಪಡೆದರು. ಅಂತಿಮವಾಗಿ ಬಸವರಾಜ ಬೊಮ್ಮಾಯಿ 43,513 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

https://x.com/ANI/status/1801858017207664682

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

3 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

4 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

5 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

6 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

7 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

7 hours ago