ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ಶನಿವಾರ (ಜೂನ್.15) ರಾಜೀನಾಮೆ ನೀಡಿದರು.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ತಮ್ಮ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರನ್ನು ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸತತ ನಾಲ್ಕು ಬಾರಿ ಜಯಗಳಿಸಿದ್ದ ಅವರು ಸಿಎಂ ಆಗಿಯೂ ಅಧಿಕಾರ ಪಡೆದಿದ್ದರು. ಇದೇ ಮೊದಲ ಬಾರಿಗೆ ಹಾವೇರಿ-ಗದಗದಿಂದ ಸ್ಪರ್ಧೇ ಮಾಡಿದ್ದ ಬೊಮ್ಮಾಯಿ ಕಾಂಗ್ರೆಸ್ ಪಕ್ಷದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ 43 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿ ಲೋಕಸಭೆಗೆ ಎಂಟ್ರಿ ಕೊಟ್ಟಿದ್ದಾರೆ.
ಇನ್ನು ಹಾವೇರಿ-ಗದಗ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬೊಮ್ಮಾಯಿ 7,05,538 ಮತ ಪಡೆದರೆ, ಆನಂದಸ್ವಾಮಿ 6,62,025 ಮತ ಪಡೆದರು. ಅಂತಿಮವಾಗಿ ಬಸವರಾಜ ಬೊಮ್ಮಾಯಿ 43,513 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…