ರಾಜ್ಯ

ಕಾಂಗ್ರೆಸ್‌ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ: ಬಸವರಾಜ ಬೊಮ್ಮಾಯಿ

ಗದಗ: ಕಾಂಗ್ರೆಸ್‌ ಸರ್ಕಾರದಲ್ಲಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಅಷ್ಟೇ ಅಲ್ಲ, ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ.

ಗದಗದಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳು ರಾಜಕೀಯ ಲಾಭಕ್ಕಾಗಿ ಮಾಡಿದ ಯೋಜನೆಯಾಗಿದೆ. ಸಾರ್ವಜನಿಕರು ಮತ್ತು ತಾಯಂದಿರ ಕಣ್ಣಲ್ಲಿ ಮಣ್ಣು ಹಾಕುವ ಯೋಜನೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಮಹಿಳೆಯರಿಗೆ ಗೌರವ ಧನ ನೀಡಲು ವಿಫಲವಾಗಿದೆ. ಈ ಹಣ ಯಾವ ತಿಂಗಳು ಸಹ ಅವರಗೆ ಬಂದಿಲ್ಲ. ಅಲ್ಲದೇ ರಾಜ್ಯ ಸರ್ಕಾರದ ಹಣಕಾಸಿನ ವ್ಯವಸ್ಥೆ ಸಂಪೂರ್ಣ ನೆಲ ಕಚ್ಚಿದ್ದು,
ಗೃಹಲಕ್ಷ್ಮೀ ಹಣವನ್ನು ಅದೇನೂ ತಿಂಗಳ ಸಂಬಳವೇ ಎಂದು ಕಾಂಗ್ರೆಸ್‌ನ ಸಚಿವರೇ ಪ್ರಶ್ನಿಸುತ್ತಾರೆ. ಆದರೆ ಆ ಹಣ ಗೌರವ ಧನವಾಗಿದ್ದು, ಪ್ರತಿ ತಿಂಗಳು ಹಣ ನೀಡಿಲ್ಲ ಎಂದರೆ ಗೌರವ ಧನ ನೀಡಿಲ್ಲ ಎಂದರ್ಥ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ದೈನಂದಿನ ಬಳಕೆಯ ವಸ್ತುಗಳ ಮೇಲೆ ಬೆಲೆ ಏರಿಕೆಯಾಗಿದೆ. ಆದರೆ ರಾಜ್ಯ ಸರ್ಕಾರ ಮಮಾತ್ರ ತೆರಿಗೆ ರೂಪದಲ್ಲ ಹಣ ಪಡೆದು ಅದನ್ನೇ ಗ್ಯಾರಂಟಿ ರೂಪದಲ್ಲಿ ಮರಳಿ ಕೊಡಲು ಮುಂದಾಗಿದೆ. ಹೀಗಿದ್ದರೂ ಸಿಎಂ ಸಿದ್ದರಾಮಯ್ಯ ತಮ್ಮ ಭಂಡತನವನ್ನು ಪ್ರದರ್ಶನ ಮಾಡಿ ರಾಜ್ಯ ಸರ್ಕಾರದ ವಿಫಲತೆ ಒಪ್ಪಿಕೊಳ್ಳುತ್ತಿಲ್ಲ ಎಂದು ವಾಗ್ದಾಳ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago