ರಾಜ್ಯ

ಕಾಂಗ್ರೆಸ್‌ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ: ಬಸವರಾಜ ಬೊಮ್ಮಾಯಿ

ಗದಗ: ಕಾಂಗ್ರೆಸ್‌ ಸರ್ಕಾರದಲ್ಲಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಅಷ್ಟೇ ಅಲ್ಲ, ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ.

ಗದಗದಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳು ರಾಜಕೀಯ ಲಾಭಕ್ಕಾಗಿ ಮಾಡಿದ ಯೋಜನೆಯಾಗಿದೆ. ಸಾರ್ವಜನಿಕರು ಮತ್ತು ತಾಯಂದಿರ ಕಣ್ಣಲ್ಲಿ ಮಣ್ಣು ಹಾಕುವ ಯೋಜನೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಮಹಿಳೆಯರಿಗೆ ಗೌರವ ಧನ ನೀಡಲು ವಿಫಲವಾಗಿದೆ. ಈ ಹಣ ಯಾವ ತಿಂಗಳು ಸಹ ಅವರಗೆ ಬಂದಿಲ್ಲ. ಅಲ್ಲದೇ ರಾಜ್ಯ ಸರ್ಕಾರದ ಹಣಕಾಸಿನ ವ್ಯವಸ್ಥೆ ಸಂಪೂರ್ಣ ನೆಲ ಕಚ್ಚಿದ್ದು,
ಗೃಹಲಕ್ಷ್ಮೀ ಹಣವನ್ನು ಅದೇನೂ ತಿಂಗಳ ಸಂಬಳವೇ ಎಂದು ಕಾಂಗ್ರೆಸ್‌ನ ಸಚಿವರೇ ಪ್ರಶ್ನಿಸುತ್ತಾರೆ. ಆದರೆ ಆ ಹಣ ಗೌರವ ಧನವಾಗಿದ್ದು, ಪ್ರತಿ ತಿಂಗಳು ಹಣ ನೀಡಿಲ್ಲ ಎಂದರೆ ಗೌರವ ಧನ ನೀಡಿಲ್ಲ ಎಂದರ್ಥ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ದೈನಂದಿನ ಬಳಕೆಯ ವಸ್ತುಗಳ ಮೇಲೆ ಬೆಲೆ ಏರಿಕೆಯಾಗಿದೆ. ಆದರೆ ರಾಜ್ಯ ಸರ್ಕಾರ ಮಮಾತ್ರ ತೆರಿಗೆ ರೂಪದಲ್ಲ ಹಣ ಪಡೆದು ಅದನ್ನೇ ಗ್ಯಾರಂಟಿ ರೂಪದಲ್ಲಿ ಮರಳಿ ಕೊಡಲು ಮುಂದಾಗಿದೆ. ಹೀಗಿದ್ದರೂ ಸಿಎಂ ಸಿದ್ದರಾಮಯ್ಯ ತಮ್ಮ ಭಂಡತನವನ್ನು ಪ್ರದರ್ಶನ ಮಾಡಿ ರಾಜ್ಯ ಸರ್ಕಾರದ ವಿಫಲತೆ ಒಪ್ಪಿಕೊಳ್ಳುತ್ತಿಲ್ಲ ಎಂದು ವಾಗ್ದಾಳ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

49 mins ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

2 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

2 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

4 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

5 hours ago

ಚಾಮರಾಜನಗರ ಅರಣ್ಯ ವಲಯದಲ್ಲಿ ಹೆಚ್ಚಿದ ಬೇಟೆಗಾರರ ಹಾವಳಿ: 16 ವರ್ಷಗಳಲ್ಲಿ 3,289 ಪ್ರಕರಣ ದಾಖಲು..!

ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು…

7 hours ago