ಬೆಳಗಾವಿ: ಬೆಳಗಾವಿಯಲ್ಲಿ ಡಿಸೆಂಬರ್.9ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ.
ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು, ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ.
ಮಂಗಳವಾರ ಹಾಗೂ ಬುಧವಾರ ಪ್ರಶ್ನೋತ್ತರ ವೇಳೆಯ ನಂತರ ಸಂಪೂರ್ಣ ಕಿತ್ತೂರು ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದರು.
ಈ ಬಾರಿ ಪರಿಷತ್ತಿನ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ ಪ್ರಶ್ನೆಗಳು ಹಾಗೂ 81 ಗಮನ ಸೆಳೆಯುವ ಸೂಚನೆಗಳು ಬಂದಿರುತ್ತವೆ ಎಂದರು.
ಮೊದಲ ವಾರ ಯುಕೆಪಿ, ಮಹದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತ ಚರ್ಚೆಗಳಿಗೆ ಒತ್ತು ನೀಡಲಾಗುವುದು.
ಇನ್ನು ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಲು ಕ್ರಮವಹಿಸಲಾಗುತ್ತಿದ್ದು, ಪರಿಷತ್ ಸದಸ್ಯರ ವೇದಿಕೆ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರಕ್ಕೆ ಸಲಹೆ ನೀಡಲು ಕ್ರಮ ವಹಿಸಲಾಗುವುದು.
ಅಧಿವೇಶನ ನಡೆಸಲು ಈ ಬಾರಿ 20 ಕೋಟಿ ಅಂದಾಜಿಸಲಾಗಿದೆ. ಶಾಸಕರ ಭವನ ನಿರ್ಮಿಸಲು ಕೆಲವು ಪ್ರಸ್ತಾವನೆಗಳು ಬಂದಿವೆ. ಇವುಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಬೆಳಗಾವಿ ವಿಭಜನೆ ಸಾಧಕ-ಬಾಧಕಗಳ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆಯಾಗಬೇಕಿದೆ ಎಂದು ತಿಳಿಸಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…