ಬೆಂಗಳೂರು : ಡೆಂಗ್ಯೂ ಕುರಿತು ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
ರಾಜ್ಯಾದ್ಯಂತ ಹಾಗೂ ಬೆಂಗಳೂರಿನಲ್ಲಿ ಪ್ರತಿದಿನ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಅಲ್ಲದೆ ಸಾವು ನೋವು ಕೂಡ ಸಂಭವಿಸುತ್ತಿವೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಈ ರೀಲ್ಸ್ ಪ್ರಿಯರಿಗೆ ಬಂಪರ್ ಆಫರ್ ನೀಡಿದೆ.
ಸಾಮಾಜಿಕ ಜಾಲತಾಣದಲ್ಲಿ ಡೆಂಗ್ಯೂ ಕುರಿತು ರೀಲ್ಸ್ ವೀಡಿಯೋಗಳನ್ನ ಬಿಬಿಎಂಪಿ ಆಹ್ವಾನಿಸಿದೆ. ಅಲ್ಲದೆ ರೀಲ್ಸ್ ಮೂಲಕ ಜಾಗೃತಿ ಮೂಡಿಸುವವರಿಗೆ ಬಹುಮಾನ ಕೂಡ ನೀಡಲಾಗುತ್ತಿದೆ. ಮೊದಲ ಐದು ಉತ್ತಮ ರೀಲ್ಸ್ ಗೆ ೨೫ ಸಾವಿರ ಬಹುಮಾನ ನೀಡಲಾಗುತ್ತಿದೆ. ಅಲ್ಲದೆ ದ್ವಿತೀಯ ಬಹುಮಾನಕ್ಕೆ ಆಯ್ಕೆಯಾಗುವ ಐವರಿಗೆ ತಲಾ ೧೦ ಸಾವಿರ ಬಹುಮಾನ ನೀಡುವುದಾಗಿ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದರ ಜೊತೆಗೆ ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ ೧ ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕ್ಷಕರಿಗೂ ೩೫ ಸಾವಿರ ಬಹುಮಾನ ನೀಡುವುದಾಗಿ ಹೇಳಿದೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…