ಬೆಂಗಳೂರು : ಡೆಂಗ್ಯೂ ಕುರಿತು ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
ರಾಜ್ಯಾದ್ಯಂತ ಹಾಗೂ ಬೆಂಗಳೂರಿನಲ್ಲಿ ಪ್ರತಿದಿನ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಅಲ್ಲದೆ ಸಾವು ನೋವು ಕೂಡ ಸಂಭವಿಸುತ್ತಿವೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಈ ರೀಲ್ಸ್ ಪ್ರಿಯರಿಗೆ ಬಂಪರ್ ಆಫರ್ ನೀಡಿದೆ.
ಸಾಮಾಜಿಕ ಜಾಲತಾಣದಲ್ಲಿ ಡೆಂಗ್ಯೂ ಕುರಿತು ರೀಲ್ಸ್ ವೀಡಿಯೋಗಳನ್ನ ಬಿಬಿಎಂಪಿ ಆಹ್ವಾನಿಸಿದೆ. ಅಲ್ಲದೆ ರೀಲ್ಸ್ ಮೂಲಕ ಜಾಗೃತಿ ಮೂಡಿಸುವವರಿಗೆ ಬಹುಮಾನ ಕೂಡ ನೀಡಲಾಗುತ್ತಿದೆ. ಮೊದಲ ಐದು ಉತ್ತಮ ರೀಲ್ಸ್ ಗೆ ೨೫ ಸಾವಿರ ಬಹುಮಾನ ನೀಡಲಾಗುತ್ತಿದೆ. ಅಲ್ಲದೆ ದ್ವಿತೀಯ ಬಹುಮಾನಕ್ಕೆ ಆಯ್ಕೆಯಾಗುವ ಐವರಿಗೆ ತಲಾ ೧೦ ಸಾವಿರ ಬಹುಮಾನ ನೀಡುವುದಾಗಿ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದರ ಜೊತೆಗೆ ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ ೧ ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕ್ಷಕರಿಗೂ ೩೫ ಸಾವಿರ ಬಹುಮಾನ ನೀಡುವುದಾಗಿ ಹೇಳಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…