ಬೆಂಗಳೂರಿನ ಪ್ರತಿಷ್ಠಿತ ಮಾಲ್ಗಳಲ್ಲಿ ಒಂದಾದ ಮಂತ್ರಿ ಸ್ಕ್ವೇರ್ ಮಾಲ್ಗೆ ಬಿಬಿಎಂಪಿ ಬೀಗ ಜಡಿದಿದೆ. ಬರೋಬ್ಬರಿ 51 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಾರಣ ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್ ಅವರಿಂದ ಬೀಗ ಹಾಕಲಾಗಿದೆ.
2019ರಿಂದ 2020ರವರೆಗಿನ ತೆರಿಗೆ ಬಾಕಿಯಿರುವ ಕಾರಣ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಈ ಹಿಂದೆಯೂ ಸಹ ಇದೇ ಮಾಲ್ಗೆ ತೆರಿಗೆ ಹಣ ಪಾವತಿಸದ ಕಾರಣಕ್ಕಾಗಿ ಹಲವು ಬಾರಿ ಬೀಗ ಹಾಕಿದ ಉದಾಹರಣೆಗಳಿವೆ.
ಇನ್ನು 2020ರ ಆಗಸ್ಟ್ನಲ್ಲಿ ಬಿಬಿಎಂಪಿಗೆ ಮಂತ್ರಿ ಸ್ಕ್ವೇರ್ ನೀಡಿದ್ದ 10 ಕೋಟಿ ಮೊತ್ತದ ಚೆಕ್ ಬೌನ್ಸ್ ಆಗಿತ್ತು ಹಾಗೂ ಬಿಬಿಎಂಪಿ ಪದೇಪದೆ ನೋಟಿಸ್ ನೀಡಿತ್ತು. ಆದರೂ ಸಹ ಮಾಲ್ನ ಆಡಳಿತ ಮಂಡಳಿ ತೆರಿಗೆ ಪಾವತಿಸು ಕ್ರಮ ಕೈಗೊಂಡಿರಲಿಲ್ಲ.
ಈ ಹಿಂದೆ 42 ಕೋಟಿ ಮೊತ್ತದ ತೆರಿಗೆಯನ್ನು ಮಂತ್ರಿ ಸ್ಕ್ವೇರ್ ಬಾಕಿ ಉಳಿಸಿಕೊಂಡಿತ್ತು. ಆ ವೇಳೆ ಮಾಲ್ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರೆ ವಸ್ತುಗಳನ್ನು ಬಿಬಿಎಂಪಿ ವಶಪಡಿಸಿಕೊಂಡಿತ್ತು.
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…
ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್ ಪುಂಡರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…
ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.19ರವರೆಗೆ ಅಧಿವೇಶನ…
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…