ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಉಲ್ಬಣಗೊಳ್ಳುತ್ತಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ರೋಗದಿಂದ ಬಳಲುತ್ತಿರುವ ಜನರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೂ ಕೂಡ ಡೆಂಗ್ಯೂ ರೋಗ ಕಾಣಿಸಿಕೊಂಡಿದ್ದು, ಕಳೆದ ನಾಲ್ಕು ದಿನಗಳಿಂದ ಮನೆಯಲ್ಲೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಜೂನ್ 22 ರವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಗಳು ಕಾಣಿಸಿಕೊಂಡಿದ್ದವು. ರಾಜಧಾನಿಯಲ್ಲೂ ಕೂಡ ಜನರಿಗೆ ನೆಗಡಿ-ಜ್ವರ ಹೆಚ್ಚಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ ಒಟ್ಟು 1,230 ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಜನವರಿಯಿಂದ 3975 ಕೇಸ್ ಪತ್ತೆ ಆಗಿದ್ದು, ಜೂನ್ ತಿಂಗಳಿನಿಂದ ಕೇಸ್ಗಳ ಸಂಖ್ಯೆ ಏರಿಕೆ ಕಂಡು ಬಂದಿದೆ.
ಇನ್ನು ರಾಜ್ಯದಲ್ಲಿ ಒಟ್ಟು 37144 ಜನರ ರಕ್ತ ಮಾದರಿಯನ್ನು ಪಡೆಯಲಾಗಿತ್ತು. ಇದರಲ್ಲಿ 3957 ಜನರಿಗೆ ಡೆಂಗ್ಯೂ ಪಾಸಿಟಿವ್ ಬಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೂ ಕೂಡ 4063 ಜನರ ಸ್ಯಾಂಪಲ್ಸ್ ಗಳನ್ನು ಸಂಗ್ರಹ ಮಾಡಲಾಗಿದ್ದು, ಈ ಪೈಕಿ 1230 ಜನರಲ್ಲಿ ಡೆಂಗ್ಯೂ ಪಾಸಿಟಿವ್ ಕಾಣಿಸಿಕೊಂಡಿತ್ತು. ಇಲ್ಲಿಯವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಗಳು ಪತ್ತೆಯಾಗಿವೆ.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…