ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಉಲ್ಬಣಗೊಳ್ಳುತ್ತಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ರೋಗದಿಂದ ಬಳಲುತ್ತಿರುವ ಜನರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೂ ಕೂಡ ಡೆಂಗ್ಯೂ ರೋಗ ಕಾಣಿಸಿಕೊಂಡಿದ್ದು, ಕಳೆದ ನಾಲ್ಕು ದಿನಗಳಿಂದ ಮನೆಯಲ್ಲೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಜೂನ್ 22 ರವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಗಳು ಕಾಣಿಸಿಕೊಂಡಿದ್ದವು. ರಾಜಧಾನಿಯಲ್ಲೂ ಕೂಡ ಜನರಿಗೆ ನೆಗಡಿ-ಜ್ವರ ಹೆಚ್ಚಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ ಒಟ್ಟು 1,230 ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಜನವರಿಯಿಂದ 3975 ಕೇಸ್ ಪತ್ತೆ ಆಗಿದ್ದು, ಜೂನ್ ತಿಂಗಳಿನಿಂದ ಕೇಸ್ಗಳ ಸಂಖ್ಯೆ ಏರಿಕೆ ಕಂಡು ಬಂದಿದೆ.
ಇನ್ನು ರಾಜ್ಯದಲ್ಲಿ ಒಟ್ಟು 37144 ಜನರ ರಕ್ತ ಮಾದರಿಯನ್ನು ಪಡೆಯಲಾಗಿತ್ತು. ಇದರಲ್ಲಿ 3957 ಜನರಿಗೆ ಡೆಂಗ್ಯೂ ಪಾಸಿಟಿವ್ ಬಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೂ ಕೂಡ 4063 ಜನರ ಸ್ಯಾಂಪಲ್ಸ್ ಗಳನ್ನು ಸಂಗ್ರಹ ಮಾಡಲಾಗಿದ್ದು, ಈ ಪೈಕಿ 1230 ಜನರಲ್ಲಿ ಡೆಂಗ್ಯೂ ಪಾಸಿಟಿವ್ ಕಾಣಿಸಿಕೊಂಡಿತ್ತು. ಇಲ್ಲಿಯವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಗಳು ಪತ್ತೆಯಾಗಿವೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…