ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಅದ್ದೂರಿ ಕಂಬಳ ಮಹೋತ್ಸವಕ್ಕೆ ಅಶ್ವಿನ್ ಪುನೀತ್ ರಾಜ್ಕುಮಾರ್ ಅವರು ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಕಂಬಳ ಪ್ರೇಮಿಗಳು ಕಂಬಳದಲ್ಲಿ ಭಾಗವಹಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕಂಬಳ ಸ್ಪರ್ಧೆ ಶುರುವಾಗಿದ್ದು, ಕೋಣಗಳ ಓಟದ ರೋಮಾಂಚನಕಾರಿ ದೃಶ್ಯವನ್ನು ವೀಕ್ಷಕರು ಕಣ್ತುಂಬಿಕೊಳ್ಳುತ್ತಿದ್ದಾರೆ.
ಈ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂಬಳ ಆಯೋಜಕರಿಗೆ ಬಿಗ್ ಶಾಕ್ ನೀಡಿದೆ. ಅರಮನೆ ಮೈದಾನದ ಮುಂದೆ ಫ್ಲೈಕ್ಸ್, ಬ್ಯಾನರ್ ಹಾಕಿದ್ದಕ್ಕೆ ಕಂಬಳ ಆಯೋಜಕರಿಗೆ 50 ಸಾವಿರ ರೂ. ದಂಡ ವಿಧಿಸಿದೆ. ಇದಲ್ಲದೇ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಬಿಬಿಎಂಪಿ ದೂರು ನೀಡಿದೆ. ಕಂಬಳಕ್ಕೆ ಶುಭಾಶಯ ಕೋರಿ ಹಾಕಿದ್ದ ಬ್ಯಾನರ್, ಸೇರಿದಂತೆ ಎಲ್ಲಾ ಬ್ಯಾನರ್ಗಳನ್ನು ತೆರವುಗೊಳಿಸಲಾಗಿದೆ.
ವಾಹನ ನಿಲುಗಡೆಗೆ ಹೆಚ್ಚಿನ ಶುಲ್ಕ: ಸಾರ್ವಜನಿಕರ ಅಸಮಧಾನ
ಕಂಬಳ ವೀಕ್ಷಿಸಲು ಜನ ಸಾಗರವೇ ಹರಿದು ಬರುತ್ತಿದೆ. ಈ ವೇಳೆ ವಾಹನ ನಿಲುಗಡೆಗೆ ಬರೋಬ್ಬರಿ ೧೫೦ರೂ. ಶುಲ್ಕ ವಿಧಿಸಲಾಗುತ್ತಿದ್ದು, ಕಂಬಳ ವಿಕ್ಷಿಸಲು ಬಂದ ಸಾರ್ವಜನಿಕರು ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…