ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಅದ್ದೂರಿ ಕಂಬಳ ಮಹೋತ್ಸವಕ್ಕೆ ಅಶ್ವಿನ್ ಪುನೀತ್ ರಾಜ್ಕುಮಾರ್ ಅವರು ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಕಂಬಳ ಪ್ರೇಮಿಗಳು ಕಂಬಳದಲ್ಲಿ ಭಾಗವಹಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕಂಬಳ ಸ್ಪರ್ಧೆ ಶುರುವಾಗಿದ್ದು, ಕೋಣಗಳ ಓಟದ ರೋಮಾಂಚನಕಾರಿ ದೃಶ್ಯವನ್ನು ವೀಕ್ಷಕರು ಕಣ್ತುಂಬಿಕೊಳ್ಳುತ್ತಿದ್ದಾರೆ.
ಈ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂಬಳ ಆಯೋಜಕರಿಗೆ ಬಿಗ್ ಶಾಕ್ ನೀಡಿದೆ. ಅರಮನೆ ಮೈದಾನದ ಮುಂದೆ ಫ್ಲೈಕ್ಸ್, ಬ್ಯಾನರ್ ಹಾಕಿದ್ದಕ್ಕೆ ಕಂಬಳ ಆಯೋಜಕರಿಗೆ 50 ಸಾವಿರ ರೂ. ದಂಡ ವಿಧಿಸಿದೆ. ಇದಲ್ಲದೇ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಬಿಬಿಎಂಪಿ ದೂರು ನೀಡಿದೆ. ಕಂಬಳಕ್ಕೆ ಶುಭಾಶಯ ಕೋರಿ ಹಾಕಿದ್ದ ಬ್ಯಾನರ್, ಸೇರಿದಂತೆ ಎಲ್ಲಾ ಬ್ಯಾನರ್ಗಳನ್ನು ತೆರವುಗೊಳಿಸಲಾಗಿದೆ.
ವಾಹನ ನಿಲುಗಡೆಗೆ ಹೆಚ್ಚಿನ ಶುಲ್ಕ: ಸಾರ್ವಜನಿಕರ ಅಸಮಧಾನ
ಕಂಬಳ ವೀಕ್ಷಿಸಲು ಜನ ಸಾಗರವೇ ಹರಿದು ಬರುತ್ತಿದೆ. ಈ ವೇಳೆ ವಾಹನ ನಿಲುಗಡೆಗೆ ಬರೋಬ್ಬರಿ ೧೫೦ರೂ. ಶುಲ್ಕ ವಿಧಿಸಲಾಗುತ್ತಿದ್ದು, ಕಂಬಳ ವಿಕ್ಷಿಸಲು ಬಂದ ಸಾರ್ವಜನಿಕರು ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…