ರಾಜ್ಯ

ರಾಜಭವನ, ವಿಧಾನಸೌಧಕ್ಕೆ ನೋಟಿಸ್‌ ಜಾರಿ: ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ರಾಜಭವನ, ವಿಧಾನಸೌಧ ಮತ್ತು ವಿಕಾಸಸೌಧ ಸೇರಿದಂತೆ ಒಟ್ಟು 258 ಸರ್ಕಾರಿ ಕಟ್ಟಡಗಳಿಗೆ ಬೃಹತ್‌ ಬೆಂಗಳೂರು ಮಹಾ ನಗರ ಪಾಲಿಕೆ ನೋಟಿಸ್‌ ಜಾರಿ ಮಾಡಿದೆ.

ಸುಮಾರು 17 ವರ್ಷಗಳಿಂದ ಕೆಲವು ಇಲಾಖೆಗಳು ಸುಸ್ತಿದಾರರಾಗಿದ್ದಾರೆಂದು ವರದಿಯಾಗಿದ್ದು, ಅಂದಾಜು 658 ಕೋಟಿ ರೂ.ಗಳಷ್ಟು ತೆರಿಗೆ ಬಾಕಿ ಹಣವನ್ನು ಪಾವತಿಸದೇ ಹಾಗೆಯೇ ಉಳಿಸಿಕೊಂಡಿದ್ದಾರೆ.

ನಾಗರೀಕ ಸಂಸ್ಥೆ ತನ್ನ ಆದಾಯವನ್ನು ಹೆಚ್ಚು ಮಾಡಿಕೊಳ್ಳಲು ಹೆಣಗಾಡುತ್ತಿರುವಾಗ, ಎಲ್ಲಾ ತೆರಿಗೆ ಸುಸ್ತಿದಾರರ ವಿರುದ್ಧ ಅವರ ಸ್ಥಾನಮಾನವನ್ನು ಲೆಕ್ಕಿಸದೆ ಕಠಿಣ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಗರೀಕ ಸಂಸ್ಥೆಯು ಒನ್ ಟೈಮ್ ಸೆಟಲ್ಮೆಂಟ್ (ಒಟಿಎಸ್) ಯೋಜನೆಯನ್ನು ಪರಿಚಯಿಸಿತ್ತು. ಈ ಯೋಜನೆಯೂ ಬಾಕಿಗಳ ಮೇಲಿನ ಚಕ್ರಬಡ್ಡಿಯನ್ನು ಮನ್ನಾ ಮಾಡಿತ್ತು. ಅಲ್ಲದೇ ಪಾವತಿಗಳನ್ನು ಉತ್ತೇಜಿಸಲು ದಂಡವನ್ನು ಶೇ.50 ರಷ್ಟು ಕಡಿಮೆ ಮಾಡಿತ್ತು. ಇದು ಸರ್ಕಾರಿ ಕಚೇರಿಗಳಿಗೂ ಮುಕ್ತವಾಗಿತ್ತು. ಆದರೆ ಈ ಯೋಜನೆ ಮುಗಿಯುವ ಮುನ್ನ ಯಾರೂ ಇದರ ಪ್ರಯೋಜನಗಳನ್ನು ಪಡೆಯಲಿಲ್ಲ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

4 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago