ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ರಾಜಭವನ, ವಿಧಾನಸೌಧ ಮತ್ತು ವಿಕಾಸಸೌಧ ಸೇರಿದಂತೆ ಒಟ್ಟು 258 ಸರ್ಕಾರಿ ಕಟ್ಟಡಗಳಿಗೆ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ನೋಟಿಸ್ ಜಾರಿ ಮಾಡಿದೆ.
ಸುಮಾರು 17 ವರ್ಷಗಳಿಂದ ಕೆಲವು ಇಲಾಖೆಗಳು ಸುಸ್ತಿದಾರರಾಗಿದ್ದಾರೆಂದು ವರದಿಯಾಗಿದ್ದು, ಅಂದಾಜು 658 ಕೋಟಿ ರೂ.ಗಳಷ್ಟು ತೆರಿಗೆ ಬಾಕಿ ಹಣವನ್ನು ಪಾವತಿಸದೇ ಹಾಗೆಯೇ ಉಳಿಸಿಕೊಂಡಿದ್ದಾರೆ.
ನಾಗರೀಕ ಸಂಸ್ಥೆ ತನ್ನ ಆದಾಯವನ್ನು ಹೆಚ್ಚು ಮಾಡಿಕೊಳ್ಳಲು ಹೆಣಗಾಡುತ್ತಿರುವಾಗ, ಎಲ್ಲಾ ತೆರಿಗೆ ಸುಸ್ತಿದಾರರ ವಿರುದ್ಧ ಅವರ ಸ್ಥಾನಮಾನವನ್ನು ಲೆಕ್ಕಿಸದೆ ಕಠಿಣ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಗರೀಕ ಸಂಸ್ಥೆಯು ಒನ್ ಟೈಮ್ ಸೆಟಲ್ಮೆಂಟ್ (ಒಟಿಎಸ್) ಯೋಜನೆಯನ್ನು ಪರಿಚಯಿಸಿತ್ತು. ಈ ಯೋಜನೆಯೂ ಬಾಕಿಗಳ ಮೇಲಿನ ಚಕ್ರಬಡ್ಡಿಯನ್ನು ಮನ್ನಾ ಮಾಡಿತ್ತು. ಅಲ್ಲದೇ ಪಾವತಿಗಳನ್ನು ಉತ್ತೇಜಿಸಲು ದಂಡವನ್ನು ಶೇ.50 ರಷ್ಟು ಕಡಿಮೆ ಮಾಡಿತ್ತು. ಇದು ಸರ್ಕಾರಿ ಕಚೇರಿಗಳಿಗೂ ಮುಕ್ತವಾಗಿತ್ತು. ಆದರೆ ಈ ಯೋಜನೆ ಮುಗಿಯುವ ಮುನ್ನ ಯಾರೂ ಇದರ ಪ್ರಯೋಜನಗಳನ್ನು ಪಡೆಯಲಿಲ್ಲ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…