ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ರಾಜಭವನ, ವಿಧಾನಸೌಧ ಮತ್ತು ವಿಕಾಸಸೌಧ ಸೇರಿದಂತೆ ಒಟ್ಟು 258 ಸರ್ಕಾರಿ ಕಟ್ಟಡಗಳಿಗೆ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ನೋಟಿಸ್ ಜಾರಿ ಮಾಡಿದೆ.
ಸುಮಾರು 17 ವರ್ಷಗಳಿಂದ ಕೆಲವು ಇಲಾಖೆಗಳು ಸುಸ್ತಿದಾರರಾಗಿದ್ದಾರೆಂದು ವರದಿಯಾಗಿದ್ದು, ಅಂದಾಜು 658 ಕೋಟಿ ರೂ.ಗಳಷ್ಟು ತೆರಿಗೆ ಬಾಕಿ ಹಣವನ್ನು ಪಾವತಿಸದೇ ಹಾಗೆಯೇ ಉಳಿಸಿಕೊಂಡಿದ್ದಾರೆ.
ನಾಗರೀಕ ಸಂಸ್ಥೆ ತನ್ನ ಆದಾಯವನ್ನು ಹೆಚ್ಚು ಮಾಡಿಕೊಳ್ಳಲು ಹೆಣಗಾಡುತ್ತಿರುವಾಗ, ಎಲ್ಲಾ ತೆರಿಗೆ ಸುಸ್ತಿದಾರರ ವಿರುದ್ಧ ಅವರ ಸ್ಥಾನಮಾನವನ್ನು ಲೆಕ್ಕಿಸದೆ ಕಠಿಣ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಗರೀಕ ಸಂಸ್ಥೆಯು ಒನ್ ಟೈಮ್ ಸೆಟಲ್ಮೆಂಟ್ (ಒಟಿಎಸ್) ಯೋಜನೆಯನ್ನು ಪರಿಚಯಿಸಿತ್ತು. ಈ ಯೋಜನೆಯೂ ಬಾಕಿಗಳ ಮೇಲಿನ ಚಕ್ರಬಡ್ಡಿಯನ್ನು ಮನ್ನಾ ಮಾಡಿತ್ತು. ಅಲ್ಲದೇ ಪಾವತಿಗಳನ್ನು ಉತ್ತೇಜಿಸಲು ದಂಡವನ್ನು ಶೇ.50 ರಷ್ಟು ಕಡಿಮೆ ಮಾಡಿತ್ತು. ಇದು ಸರ್ಕಾರಿ ಕಚೇರಿಗಳಿಗೂ ಮುಕ್ತವಾಗಿತ್ತು. ಆದರೆ ಈ ಯೋಜನೆ ಮುಗಿಯುವ ಮುನ್ನ ಯಾರೂ ಇದರ ಪ್ರಯೋಜನಗಳನ್ನು ಪಡೆಯಲಿಲ್ಲ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…