ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಕಾರಣ ರಾಜಭವನ, ವಿಧಾನಸೌಧ ಸೇರಿದಂತೆ ಒಟ್ಟು 258 ಸರ್ಕಾರ ಕಟ್ಟಡಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ನೀಡಿದೆ.
ರಾಜ್ಯಾದ್ಯಂತ ಬಹುತೇಕ ಸರ್ಕಾರಿ ಇಲಾಖೆಗಳು ಸುಮಾರು 8 ಸಾವಿರ ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿವೆ. ಇದರ ಬೆನ್ನಲ್ಲೇ ರಾಜಭವನ, ವಿಧಾನಸೌಧ ಮತ್ತು ವಿಕಾಸಸೌಧ ರಾಜಭವನ ಸೇರಿದಂತೆ 258 ಸರ್ಕಾರಿ ಕಟ್ಟಡಗಳು ಕೋಟಿಗಟ್ಟಲೆ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಕಾರಣ ನೋಟಿಸ್ ನೀಡಲಾಗಿದೆ. ಅಲ್ಲದೇ ಆ ಕಟ್ಟಡಗಳಲ್ಲಿ ಕೆಲವು ಸರ್ಕಾರಿ ಕಚೇರಿಗಳು 17 ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿವೆ. ಹೀಗಾಗಿ ಆಯಾ ಇಲಾಖೆ ಮುಖ್ಯಸ್ಥರಿಗೆ ತೆರಿಗೆ ಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ನೋಟಿಸ್ನಲ್ಲಿ ನೀಡಿರುವ ಕಾಲಾವಧಿಯೊಳಗೆ ತೆರಿಗೆ ಪಾವತಿ ಮಾಡದಿದ್ದರೆ, ಸರ್ಕಾರದ ಗಮನಕ್ಕೆ ತಂದು ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…