ರಾಜ್ಯ

ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಯತ್ನಿಸುತ್ತಾರೆ ಹುಷಾರು: ಸಿಎಂ ಎಚ್ಚರಿಕೆ

ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ: ಮುಖ್ಯಮಂತ್ರಿಗಳ ಗ್ಯಾರಂಟಿ ನುಡಿ

ಹಾಸನ: ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆಎಂದು ಸ್ಪಷ್ಟ ಭರವಸೆ ನೀಡಿದರು.

ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು.

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ಸಂದರ್ಭದಲ್ಲಿ ಸ್ಪಷ್ಟ ಸೂಚನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

6 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

6 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

6 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

6 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

6 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

7 hours ago