ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ: ಮುಖ್ಯಮಂತ್ರಿಗಳ ಗ್ಯಾರಂಟಿ ನುಡಿ
ಹಾಸನ: ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆಎಂದು ಸ್ಪಷ್ಟ ಭರವಸೆ ನೀಡಿದರು.
ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು.
ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು.
ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ಸಂದರ್ಭದಲ್ಲಿ ಸ್ಪಷ್ಟ ಸೂಚನೆ ನೀಡಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…
ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…