ರಾಜ್ಯ

ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಯತ್ನಿಸುತ್ತಾರೆ ಹುಷಾರು: ಸಿಎಂ ಎಚ್ಚರಿಕೆ

ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ: ಮುಖ್ಯಮಂತ್ರಿಗಳ ಗ್ಯಾರಂಟಿ ನುಡಿ

ಹಾಸನ: ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆಎಂದು ಸ್ಪಷ್ಟ ಭರವಸೆ ನೀಡಿದರು.

ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು.

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ಸಂದರ್ಭದಲ್ಲಿ ಸ್ಪಷ್ಟ ಸೂಚನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೋಟೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಜ್ಜು

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…

2 mins ago

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

18 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

22 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

22 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

22 hours ago