ರಾಜ್ಯ

ಎಣ್ಣೆ ಪ್ರಿಯರಿಗೆ ಶಾಕ್‌ ; ಮತ್ತೆ ಬಿಯರ್‌ ಬೆಲೆ ಏರಿಕೆ

ಬೆಂಗಳೂರು : ಕಳೆದ ಎರಡು ವರ್ಷಗಳಿಂದ ಆಗಾಗ ಮದ್ಯದ ಬೆಲೆ ಏರಿಕೆ ಮಾಡುತ್ತಾ, ಮದ್ಯಪ್ರಿಯರಿಗೆ ಶಾಕ್ ನೀಡುತ್ತಾ ಬಂದಿರುವ ರಾಜ್ಯ ಸರ್ಕಾರ ಇದೀಗ ಮತ್ತೇ ಬಿಯರ್ ಬೆಲೆ ಏರಿಕೆ ಮಾಡಿದೆ.

ಸದ್ಯ ಕಳೆದ ಎರಡು ವರ್ಷದಲ್ಲಿ ನಾಲ್ಕನೇ ಬಾರಿ ಬಿಯರ್ ದರ ಏರಿಕೆ ಮಾಡಲಾಗಿದೆ. ಐಎಂಎಲ್ ಮೊದಲ ಮೂರು ಸ್ಟ್ರಾಬ್‌ಗಳಿಗೆ (180 ಮಿ.ಲೀ) 15 ರೂಪಾಯಿ ಹಾಗೂ ನಾಲ್ಕನೇ ಸ್ಟ್ರಾಬ್‌ಗೆ 5 ರೂಪಾಯಿ ಏರಿಕೆ ಮಾಡಲಾಗಿದೆ.

2025ರ ಆರಂಭದಲ್ಲಿಯೇ ದೇಸೀಯ ಮದ್ಯ (ಐಎಂಎಲ್) ಮತ್ತು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಹೆಚ್ಚಿಸಿತ್ತು. ಇದೀಗ ರಾಜ್ಯ ಸರ್ಕಾರವು ಮತ್ತೆ ಎಇಡಿ ಏರಿಕೆ ಮಾಡಿದೆ. ಪರಿಷ್ಕೃತ ದರವು ಮೇ 15 ರಿಂದಲೇ (ಇಂದಿನಿಂದ) ಜಾರಿಯಾಗಿದೆ.

ರಾಜ್ಯ ಸರ್ಕಾರವು ಶೇ.5ರಷ್ಟು ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸಿದ ಬಳಿಕ ಈ ಬೆಲೆ ಏರಿಕೆ ಜಾರಿಯಾಗಿದೆ. ಬಿಯರ್ ಮೇಲಿನ AED ಅನ್ನು 195% ರಿಂದ 200%ಕ್ಕೆ ಹೆಚ್ಚಿಸಲಾಗಿದೆ ಎಂದು ಅಧಿ ಸೂಚನೆಯಲ್ಲಿ ತಿಳಿಸಲಾಗಿದೆ. ಸರ್ಕಾರವು AED ಅನ್ನು ಶೇ.10 ರಷ್ಟು ಹೆಚ್ಚಿಸಲು ಯೋಜಿಸಿತ್ತು. ಆದರೆ ಫೆಡರೇಶನ್ ಆಫ್ ವೈನ್ ಮರ್ಚೆಂಟ್ ಅಸೋಸಿಯೇಷನ್ ಕರ್ನಾಟಕ ಮದ್ಯದ ಬೆಲೆಗಳಲ್ಲಿ ಪದೇ ಪದೆ ತೀವ್ರ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿದ್ದರಿಂದ ಅದನ್ನು ಶೇ.10 ಬದಲಿಗೆ ಶೇ.5ರಷ್ಟು ಏರಿಕೆ ಮಾಡಲು ನಿರ್ಧರಿಸಿದೆ.

ಈಗ ಎಇಡಿ ಏರಿಕೆಯೊಂದಿಗೆ ಪ್ರೀಮಿಯಂ ಅಥವಾ ಇತರೆ ಬಿಯರ್ ಬ್ರಾಂಡ್‌ ಗಳ ಬೆಲೆಯು ಉತ್ಪಾದನಾ ವೆಚ್ಚವನ್ನು ಅವ ಲಂಬಿಸಿ ಪ್ರತಿ ಬಾಟಲಿಗೆ ಸರಾಸರಿ 10 ರಿಂದ 15 ರೂಪಾಯಿ ಏರಿಕೆ ಆಗಬಹು ದೆಂದು ನಿರೀಕ್ಷಿಸಲಾಗಿದೆ. ಪ್ರೀಮಿಯಂ ಬ್ರಾಂಡ್‌ಗಳ ಬಿಯ‌ರ್ ದರವು ಬಾಟಲಿಗೆ 10 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ

ಮಧ್ಯಮ ಶ್ರೇಣಿಯ ಮತ್ತು ಅಗ್ಗದ ಸ್ಥಳೀಯ ಬ್ರಾಂಡ್‌ಗಳ ಬಿಯರ್ ದರ 5 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆ ಯಿದೆ. ಬೆಲೆ ಏರಿಕೆಯು ಬ್ರಾಂಡ್‌ನಿಂದ ಬ್ರಾಂಡ್‌ಗೆ ವ್ಯತ್ಯಾಸವಾಗಲಿದೆ. ಆಲೋ ಜಾರಿ ಪ್ರಮಾಣ ಹೆಚ್ಚಿರುವ ಬ್ರಾಂಡ್ ಗಳ ಬಿಯರ್ ಬೆಲೆಯು ಗಣನೀಯವಾಗಿ ಏರಿಕೆಯಾಗಲಿದೆ ಎಂದು ಅಬಕಾರಿ ಇಲಾಖೆಯ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

24 seconds ago

ನಗರ ಪಾಲಿಕೆಯಲ್ಲಿ ವೈದ್ಯ ಪದವಿ ಆರೋಗ್ಯಾಧಿಕಾರಿಗೆ ಕೊಕ್: ಇಂಜಿನಿಯರ್‌ಗೆ ಹೊಸ ಹುದ್ದೆ!

ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…

8 mins ago

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

9 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

9 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

11 hours ago