ಬೆಂಗಳೂರು: ಡಿಸೆಂಬರ್.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಡಿಸೆಂಬರ್.9ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. 2 ವಾರಕ್ಕಿಂತ ಹೆಚ್ಚು ದಿನಗಳ ಕಾಲ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಅಧಿವೇಶನದಲ್ಲಿ ಯಾವ ಯಾವ ವಿಷಯಗಳನ್ನು ಚರ್ಚೆ ನಡೆಸಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ವಕ್ಫ್ ಆಸ್ತಿ ನೋಂದಣಿ, ಪಡಿತರ ಚೀಟಿ ಗೊಂದಲ, ಅಬಕಾರಿ ಇಲಾಖೆ ಹಗರಣದ ಬಗ್ಗೆ ಅಧಿವೇಶನದಲ್ಲಿ ಸಂಪೂರ್ಣವಾಗಿ ಪ್ರಸ್ತಾಪ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾಗಿರುವ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಹೆಚ್ಚು ಸಮಯದ ಅವಶ್ಯಕತೆಯಿದೆ. ಅಧಿವೇಶನದಲ್ಲಿ ಹಲವಾರು ವಿಷಯಗಳನ್ನು ಸಮಗ್ರವಾಗಿ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನವನ್ನು ಎರಡು ವಾರಗಳ ಕಾಲ ನಡೆಸುವಂತೆ ಮನವಿ ಮಾಡುತ್ತೇವೆ ಎಂದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…