ರಾಜ್ಯ

ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಡಿಸೆಂಬರ್‌ 20ವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಆಡಳಿತ ವಿಪಕ್ಷಗಳ ನಡುವೆ ಸದನ ಕದನಕ್ಕೆ ವೇದಿಕೆಯಾಗಲಿದೆ. ಸರ್ಕಾರದ ವಿರುದ್ಧ ಹೋರಾಟಕ್ಕೆ ಹಲವು ಅಸ್ತ್ರಗಳನ್ನು ವಿರೋಧ ಪಕ್ಷಗಳು ತನ್ನ ಬತ್ತಳಿಕೆಯಲ್ಲಿ ಇಟ್ಟುಕೊಂಡಿವೆ.

ಅಧಿವೇಶನದ ಮೊದಲ ದಿನವೇ ವಕ್ಫ್‌ ವಿಚಾರವನ್ನು ಕೈಗೆತ್ತಿಕೊಂಡು ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಪಟ್ಟು ಹಿಡಿಯಲಿದೆ. ನಿಲುವಳಿ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿ ಗದ್ದಲ ಉಂಟು ಮಾಡುವ ಸಾಧ್ಯತೆ ಇದೆ. ವಕ್ಫ್‌ ಚರ್ಚೆಗೆ ಬಂದರೆ ಎರಡು ದಿನಗಳ ಕಾಲ ಇದೇ ಮುಂದುವರಿಯಲಿದೆ. ನಂತರದಲ್ಲಿ ಸಿಎಂ ಉತ್ತರವೂ ಮಹತ್ವ ಪಡೆದುಕೊಳ್ಳಲಿದೆ.

ವಕ್ಫ್‌ ವಿಚಾರದ ಜೊತೆಗೆ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣವೂ ಸದನವೂ ಸದನದಲ್ಲಿ ಸದ್ದು ಗದ್ದಲಕ್ಕೆ ಕಾರಣವಾಗಲಿದೆ. ಬಳ್ಳಾರಿಯಲ್ಲಿ 5 ಬಾಣಂತಿಯರು ಮೃತಪಟ್ಟಿದ್ದಾರೆ. ಇದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಹೀಗಾಗಿ ಸದನದಲ್ಲಿ ಚರ್ಚೆಯ ಸಂದರ್ಭದಲ್ಲಿ ಈ ವಿಚಾರಕ್ಕೂ ವಿರೋಧ ಪಕ್ಷಗಳು ಹೆಚ್ಚಿನ ಆದ್ಯತೆಯನ್ನು ನೀಡಲಿದೆ. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣ, ವಾಲ್ಮೀಕಿ ನಿಗಮ ಹಗರಣ ಸೇರಿದಂತೆ ಅಬಕಾರಿ ಇಲಾಖೆಯ ಭ್ರಷ್ಟಚಾರ ಸಹ ಮುನ್ನಲೆಗೆ ಬರಲಿದೆ.

ಉತ್ತರ ಕರ್ನಾಟಕದ ಚರ್ಚೆಗೆ ಆದ್ಯತೆ ಸಿಗಲಿ
ಬೆಳಗಾವಿಯ ಅಧಿವೇಶನದ ಮೂಲ ಉದ್ದೇಶ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಆಗಬೇಕು ಎಂಬುವುದಾಗಿದೆ. ಉತ್ತರ ಕರ್ನಾಟಕದಲ್ಲಿ ರೈತರು ಹಾಗೂ ಜನಸಾಮಾನ್ಯರು ಎದುರಿಸುವ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕು. ಈ ಮೂಲಕ ಬೆಳಗಾವಿ ಅಧಿವೇಶನ ಅರ್ಥಪೂರ್ಣ ಆಗಬೇಕು ಎಂಬುವುದು ಉತ್ತರ ಕರ್ನಾಟಕ ಭಾಗದ ಶಾಸಕರ ಬೇಡಿಕೆಯಾಗಿದೆ. ಆದರೆ ಪ್ರತಿವರ್ಷ ಉತ್ತರ ಕರ್ನಾಟಕದ ಚರ್ಚೆಗೆ ಅವಕಾಶ ಸಿಗುವುದೇ ಕೊನೆಯ ಗಳಿಗೆಯಲ್ಲಿ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

9 mins ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

22 mins ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

26 mins ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

47 mins ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

1 hour ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

1 hour ago