ರಾಜ್ಯ

ಬೆಳಗಾವಿ| ಬಾಣಂತಿ, ಶಿಶುಗಳ ಸಾವು: ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವಿಜಯೇಂದ್ರ

ಬೆಳಗಾವಿ: ಬಳ್ಳಾರಿ ರೀತಿಯಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಬಾಣಂತಿಯರ ಸಾವುಗಳು ಕಳೆದ ಆರು ತಿಂಗಳಿನಿಂದ ಏರುಗತಿಯಲ್ಲಿದೆ. ದಿನೇ ದಿನೇ ಹಸುಗೂಸುಗಳ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದ್ದು ಈ ಕುರಿತು ವಾಸ್ತವ ಸ್ಥಿತಿ ನೋಡಲು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಚಳಿಗಾಲದ ಅಧಿವೇಶನಕ್ಕೆ ಪಾಳ್ಗೊಳ್ಳುವ ಮುನ್ನ ಆಸ್ಪತ್ರೆಗೆ ಭೇಟಿ ನೀಡಿದ ವಿಜಯೇಂದ್ರ ಅಲ್ಲಿನ ಬಾಣಂತಿಯರು, ಮಕ್ಕಳ ಆರೋಗ್ಯ ವಿಚಾರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 6 ಬಾಣಂತಿಯರ ಸಾವಾಗಿದೆ. ದಿನೇ ದನೇ ಶಿಶು ಮರಣ ಹೆಚ್ಚಾಗುತ್ತಿದ್ದು ಇದಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸಮಗ್ರ ಸತ್ಯಾಂಶ ಆಧಾರದ ಮೇಲೆ ಸದನದಲ್ಲಿ ಇದರ ವಿರುದ್ಧ ಧ್ವನಿ ಎತ್ತುತ್ತೇವೆ. ಇದು ರಾಜಕಾರಣ ಮಾಡುವ ವಿಷಯವೇ ಅಲ್ಲ ಎಂದರು.

ಸರ್ಕಾರಿ ಆಸ್ಪತ್ರೆಗೆ ಹೋಗುವ ಬಡವರಿಗೆ ಅನ್ಯಾಯವಾಗುತ್ತಿದ್ದು, ಬಾಣಂತಿಯರು ಅವರ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ಇದರ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದೆ. ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಯಾರು ತಲೆಕೆಡಿಸಿಕೊಳ್ಳುತ್ತಿಲ್ಲ. ಈ ವಿಚಾರದಲ್ಲಿ ಸರ್ಕಾರ ತುರ್ತಾಗಿ ಗಮನಹರಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಮಾತನಾಡಿದ ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯದಲ್ಲಿ ಬಾಣಂತಿಯರು, ಹಸುಗೂಸುಗಳು ತೀರಿಕೊಂಡಿದ್ದನ್ನು ಗಮನಿಸಿದರೆ ಸರ್ಕಾರ ಮೆಡಿಕಲ್‌ ಮಾಫಿಯಾದೊಂದಿಗೆ ಸೇರಿ ಭ್ರಷ್ಟಚಾರದಲ್ಲಿ ತೊಡಗಿರುವ ಆಗಿದೆ. ಸರ್ಕಾರಿ ಆಸ್ಪತ್ರೆಗಳು ಶವಗಾರ ಆಗುತ್ತಿವೆ. ಇದಕ್ಕೆ ನೇರ ಹೊಣೆ ಕಾಂಗ್ರೆಸ್‌ ಸರ್ಕಾರವೇ ಆಗಿದ್ದು ಇದರ ವಿರುದ್ಧ ನಾವು ಸದನದಲ್ಲಿ ಧ್ವನಿ ಎತ್ತುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ. ಅಶ್ವತ್ಥ ನಾರಾಯಣ, ಶಾಸಕಿ ಶಶಿಕಲಾ ಜೊಲ್ಲೆ ಸೇರಿ ಹಲವು ಬಿಜೆಪಿ ಮುಖಂಡರು ಇವರಿಗೆ ಸಾಥ್‌ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago