ರಾಜ್ಯ

ಸ್ವಾತಂತ್ರ್ಯಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು: ಹೆಬ್ಬಾಳ್ಕರ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ಬೆಳಗಾವಿ ಜಿಲ್ಲೆಯು ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರಕ್ಕೆ ಸೇರ್ಪಡೆಗೊಂಡಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿಕೆ ನೀಡಿದ್ದು, ಇಗೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ನೆನ್ನೆ(ಜನವರಿ ೭) ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದ ೬ನೇ ಕನ್ನಡ ಸಮಾವೇಶದಲ್ಲಿ ಬಾಗಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾತಿನ ಭರದಲ್ಲಿ ಬೆಳಗಾವಿ ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕನ್ನಡ ಭಾಷೆಗೆ ಹಲವು ವರ್ಷಗಳ ಇತಿಹಾಸವಿದೆ. ನಮ್ಮ ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿ ಜೀವಂತವಾಗಿದೆ. ಇದನ್ನು ನಮ್ಮ ಸಾಹಿತಿಗಳು ಸಾಭೀತು ಮಾಡಿದ್ದಾರೆ. ನಮ್ಮ ಭಾಷೆಗೆ ಒಟ್ಟು ೮ ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ನಮ್ಮ ಹೆಮ್ಮೆಯಾಗಿದೆ. ಇಂತಹ ನಾಡಿನಲ್ಲಿ ಹಟ್ಟಲು ನಾವು ಪುಣ್ಯ ಮಾಡಿರಬೇಕು ಎಂದು ಹೇಳುತ್ತಾ, ಅದರ ಮಧ್ಯೆ ಭಾಷಣದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಹೇಳಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್‌ ವೈರಲ್‌ ಆಗಿದೆ.

ಬೆಳಗಾವಿ ಕರ್ನಾಟಕಕ್ಕೆ ಸೇರಿ ಹಲವು ವರ್ಷಗಳಾಗಿವೆ. ಕಾಂಗ್ರೆಸ್‌ ಓಟಿನ ರಾಜಕಾರಣ ಮಾಡುತ್ತಿದೆ. ಮುಂದೆ ಕಾಶ್ಮೀರಾ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಕಾಂಗ್ರೆಸ್‌ನವರು ಹೇಳುತ್ತಾರೆ. ಹೆಬ್ಬಾಳ್ಕರ್‌ ಹೇಳಿಕೆ ವಿಷಾದನೀಯ, ಇವರು ಆರೂವರೆ ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಸಂಪುಟದಿಂದ ಹೊರಗಿಡಬೇಕು ಎಂದು ಬೆಂಗಳೂರಿನಲ್ಲಿ ಶಾಸಕ ಎಸ್‌.ಆರ್‌ ವಿಶ್ವನಾಥ್‌ ಆಕ್ರೋಶ ಹೊರ ಹಾಕಿದ್ದಾರೆ.

ಕರ್ನಾಟಕ ವಿವಿಧ ರಾಜ್ಯದಲ್ಲಿ ಹಂಚಿಹೋಗಿತ್ತು, ನಂತರದಲ್ಲಿ ಕರ್ನಾಟಕ ಏಕೀಕರಣವಾಗಿದ್ದು. ಇಂತಹ ಸಂದರ್ಭದಲ್ಲಿ ಹಿಂದಕ್ಕೆ ಹೋಗುವ ಅವಶ್ಯಕತೆಯಿರಲಿಲ್ಲ. ಇದೊಂದು ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು, ಹೇಳಿಕೆ ನೀಡುವ ಅವಶ್ಯಕತೆಯಿರಲಿಲ್ಲ. ಇದು ರಾಜಕೀಯ ಹುನ್ನಾರವಾಗಬಾರದು. ಕನ್ನಡಿಗರು ವಿವಿಧತೆಯಲ್ಲಿ ಏಕತೆಯನ್ನು ಕಾಣಬೇಕು. ಹೆಬ್ಬಾಳ್ಕರ್‌ ಹೇಳಿಕೆಯನ್ನು ಕನ್ನಡಿಗರಾಗಲಿ, ಮರಾಠಿಗರಾಗಲಿ ಬೆಂಬಲಿಸಲ್ಲ ಎಂದು ಡಾ. ಅಶ್ವಥ್‌ ನಾರಾಯಣ್‌ ಹೇಳಿದ್ದಾರೆ.

andolanait

Recent Posts

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

9 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

49 mins ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago