ರಾಜ್ಯ

ಬೆಳಗಾವಿ | ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕಿಯರ ಮೇಲೆ ಗ್ಯಾಂಗ್‌ ರೇಪ್‌ ; ಇಬ್ಬರ ಬಂಧನ

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವದತ್ತಿ ಗ್ರಾಮದ ಬಳಿಯ ಗುಡ್ಡಾಗಾಡು ಪ್ರದೇಶದಲ್ಲಿ 17 ವರ್ಷದ ಇಬ್ಬರು ಯುವತಿಯರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಸುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಮಾಹಿತಿ ನೀಡಿದ ಜಿಲ್ಲಾ ಎಸ್‌ಪಿ ಡಾ.ಭೀಮಾಶಂಕರ್‌ ಗುಳೇದ್‌, ಆರೋಪಿ ಅಭಿಷೇಕ್‌ ಇನ್‌ಸ್ಟಾಗ್ರಾಂ ಮೂಲಕ ಓರ್ವ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದಾನೆ. ಪರಿಚಯ ಸಲುಗೆಯಾಗಿ ಬೆಳೆದಿದೆ. ಬಳಿಕ ಪುಸಲಾಯಿಸಿ ಸವದತ್ತಿಯ ಎಲ್ಲಮ್ಮನ ಗುಡ್ಡಕ್ಕೆ ಕರೆದೊಯ್ದಿದ್ದಾನೆ. ಈ ವೇಳೆ ಬಾಲಕಿ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಹೋಗಿದ್ದಾಳೆ. ಇಬ್ಬರೂ ಒಟ್ಟಾಗಿ ಕಾರಿನಲ್ಲಿ ಹೋಗಿದ್ದಾರೆ. ಕಾರಿನಲ್ಲಿ ಮೂವರು ಆರೋಪಿಗಳಿದ್ದರು. ಎಲ್ಲರೂ ಒಟ್ಟಾಗಿ ಸೇರಿ ಇಬ್ಬರು ಬಾಲಕಿಯರ ಮೇಲೂ ಅತ್ಯಾಚಾರ ಮಾಡಿದ್ದಾರೆ. ಜೊತೆಗೆ ಅತ್ಯಾಚಾರದ ವಿಡಿಯೋ ಚಿತ್ರಿಸಿಕೊಂಡು ಬೆದರಿಕೆ ಹೊಡ್ಡಿದ್ದಾರೆ ಎಂದು ಹೇಳಿದರು.

ಆರೋಪಿಗಳಾದ ಅಭೀಷೆಕ್‌ , ಆದಿಲ್‌ ಶಾ ಮತ್ತು ಕೌತುಕ್‌ ಅತ್ಯಾಚಾರದ ಪ್ರತಿ ಕ್ಷಣಗಳನ್ನು ವಿಡಿಯೋ ಚಿತ್ರೀಕರಿಸಿಕೊಂಡಿದ್ದರು. ಇದನ್ನೇ ಇಟ್ಟುಕೊಂಡು ಪದೇಪದೇ ಬರುವಂತೆ ಒತ್ತಾಯ ಮಾಡುತ್ತಿದ್ದರು. ಅಲ್ಲದೇ ಮುಂದಿನ ವಾರ ಎಲ್ಲರೂ ಸೇರಿ ಗೋವಾಗೆ ಹೋಗೋಣ, ಬರದೆ ಇದ್ದರೆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತೇವೆ ಎಂದು ಬ್ಲ್ಯಾಕ್‌ಮೇಲ್‌ ಮಾಡಿದ್ದರು. ಇದರಿಂದ ಹೆದರಿದ ಒಬ್ಬ ಯುವತಿ ಜ.13ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರವೇ ಪ್ರಕರಣ ಗೊತ್ತಾಗಿದ್ದು ಎಂದು ಎಸ್‌ಪಿ ತಿಳಿಸಿದರು.

ಪ್ರಕರಣ ದಾಖಲಾದ 24ಗಂಟೆಯೊಳಗೆ ಇಬ್ಬರು ಆರೋಪಿಯನ್ನು ಬಂಧಿಸಿಲಾಗಿದೆ. ಇನ್ನೊರ್ವ ಆರೋಪಿಗೆ ಶೋಧನೆ ನಡೆಯುತ್ತಿದೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…

19 mins ago

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

1 hour ago

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

1 hour ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

1 hour ago

ಚಾಮರಾಜನಗರ| ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…

2 hours ago

ಸಿಎಂ ಸಿದ್ದರಾಮಯ್ಯ ತವರಲ್ಲಿ ದಲಿತ ಸಿಎಂ ಕೂಗು

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ…

2 hours ago