ರಾಜ್ಯ

ಬೆಳಗಾವಿ ಪಂಚಮಸಾಲಿ ಹೋರಾಟ:ಐವರ ವಿರುದ್ಧ ಎಫ್‌ಐಆರ್‌

ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಬುಧವಾರ ಕಲ್ಲು ತೊರಾಟದಲ್ಲಿ ಪೊಲೀಸ್‌ ಇಸ್ಟ್‌ಪೆಕ್ಟರ್‌ ಸೇರಿದಂತೆ 17 ಜನರಿಗೆ ಗಾಯವಾಗಿದೆ. ಜೊತೆಗೆ ಸರ್ಕಾರಿ ಬಸ್‌, ಪೊಲೀಸ್‌ ವಾಹನಗಳು ಸಹ ಜಖಂಗೊಂಡ ಹಿನ್ನೆಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಲ್ಲು ಎಸೆದ ನಿಂಗಪ್ಪ ಬಣದ್‌, ಉಮೇಶ್‌ ಇಂಗಳೆವಾರ್‌, ರಾಮಗೌಡ ಫಕೀರಗೌಡ, ಮಂಜುನಾಥ್‌ ಬೆಂಡಿಗೇರಿ, ಮಂಜುನಾಥ್‌ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಜೊತೆಗೆ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್‌ ಕಲಂ 115(2), 109(1), 118(2), 352, 351(2) 132,121,223,324,184,189(3), 192(2), 190 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200…

6 mins ago

ನಮಗೂ ಸಚಿವ ಸ್ಥಾನ ಕೊಡಿ: ಸಂಪುಟ ಪುನಾರಚನೆಗೆ 24 ಎಂಎಲ್‌ಸಿಗಳಿಂದ ಪತ್ರ

ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24…

16 mins ago

ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು…

21 mins ago

ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ: ಎಚ್.ಡಿ.ದೇವೇಗೌಡ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್‌ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ…

25 mins ago

ವಿರಾಜಪೇಟೆಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ವಿರಾಜಪೇಟೆ: ವಿರಾಜಪೇಟೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ…

31 mins ago

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌…

2 hours ago