ರಾಜ್ಯ

2022ರ ಬೆಳಗಾವಿ ಅಧಿವೇಶನ: ಇನ್ನೂ ಪಾವತಿಯಾಗಿಲ್ಲ ಶಾಸಕರು ಮತ್ತು ಸಚಿವರ ಹೋಟೆಲ್ ಬಿಲ್!

ಬೆಳಗಾವಿ: ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಶಾಸಕರು, ಅವರ ಸಿಬ್ಬಂದಿ ಮತ್ತು ಸರ್ಕಾರಿ ಅಧಿಕಾರಿಗಳಿಗೆ ವಸತಿ ಸೇವೆ ಒದಗಿಸಿದ್ದ ಹೋಟೆಲ್ ಮತ್ತು ಲಾಡ್ಜ್ ಮಾಲೀಕರ ಬಿಲ್‌ ತೆರವುಗೊಳಿಸಲು ಬೆಳಗಾವಿ ನಗರ ನಿಗಮ (ಬಿಸಿಸಿ) ಆಯುಕ್ತ ಅಶೋಕ್ ದುಗುಂಟಿ ಮುಂದಾಗಿದ್ದಾರೆ.

ಹೋಟೆಲ್ ಮತ್ತು ವಸತಿ ಮಾಲೀಕರನ್ನು ಭೇಟಿ ಮಾಡಿದ ಅವರು, ಬಿಲ್‌ಗಳನ್ನು ಪರಿಶೀಲಿಸಿದ ನಂತರ ಅವುಗಳನ್ನು ಜಿಲ್ಲಾಡಳಿತದ ಮುಂದೆ  ಇಡಲಾಗುವುದು, ನಂತರ ಅವುಗಳನ್ನು ಅನುಮೋದಿಸಲಾಗುವುದು ಎಂದು ಹೇಳಿದರು.

ಡಿಸೆಂಬರ್ 4 ರಿಂದ 15 ರ ನಡುವೆ ಸರ್ಕಾರವು ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಸಾಧ್ಯತೆಯಿದೆ. ನಗರಸಭೆ ಅಧಿಕಾರಿಗಳು ಈ ಹಿಂದೆ ಹೋಟೆಲ್ ಮತ್ತು ಲಾಡ್ಜ್ ಮಾಲೀಕರೊಂದಿಗೆ ಸಭೆ ನಡೆಸಿ, ಅಧಿವೇಶನಕ್ಕೆ ಹಾಜರಾಗುವ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಕೊಠಡಿಗಳನ್ನು ಕಾಯ್ದಿರಿಸುವಂತೆ ಕೇಳಿದರು. ಆದರೆ 2022 ರ ಚಳಿಗಾಲದ ಅಧಿವೇಶನದ ಬಿಲ್‌ಗಳು ಇನ್ನೂ ಬಾಕಿ ಉಳಿದಿವೆ ಎಂದು ಹೋಟೆಲ್ ಮಾಲೀಕರು ದೂರಿದ್ದಾರೆ.

ಬೆಳಗಾವಿ ಹೋಟೆಲ್ ಮಾಲೀಕರ ಸಂಘದ (ಬಿಎಚ್‌ಒಎ) ಅಧ್ಯಕ್ಷ ಅಜಯ್ ಪೈ ಮಾತನಾಡಿ, ಎಷ್ಟು ಹೋಟೆಲ್‌ಗಳು ಪಾವತಿಗಳನ್ನು ಸ್ವೀಕರಿಸಿವೆ ಮತ್ತು ಎಷ್ಟು ಬಾಕಿ ಉಳಿದಿವೆ ಎಂಬ ಎಲ್ಲಾ ವಿವರಗಳನ್ನು ಒಂದು ವಾರದೊಳಗೆ ಮಾಹಿತಿ ನೀಡುವಂತೆ ಆಯುಕ್ತರು ಸಂಘಕ್ಕೆ ಸೂಚಿಸಿದ್ದಾರೆ. ನಗರದಲ್ಲಿನ ಕೆಲವು ಪ್ರಮುಖ ಹೋಟೆಲ್‌ಗಳು ಇನ್ನೂ ಬಿಎಚ್‌ಒಎ ಸದಸ್ಯರಾಗಿ ನೋಂದಾಯಿಸಿಕೊಂಡಿಲ್ಲ ಎಂದು ಅವರು ಹೇಳಿದರು.

ಬೆಳಗಾವಿ ನಗರ ಪಾಲಿಕೆಗೆ ಮಾಹಿತಿ ಸಲ್ಲಿಸಲು, ಹಾಗೂ ಬಿಎಚ್ ಒ ಸದಸ್ಯತ್ವ ನೋಂದಣಿಗೆ ಸಮಯ ನೀಡಿದ್ದು ಒಂದು ವಾರದೊಳಗೆ ವಿವರಗಳನ್ನು ಸಲ್ಲಿಸಲು ತಿಳಿಸಿದ್ದೇವೆ.  ಒಂದು ವಾರದಲ್ಲಿ  ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ರವಾನಿಸಲಾಗುತ್ತದೆ. ಆ ಬಳಿಕವಷ್ಟೇ ಬಾಕಿ ಇರುವ  ಒಟ್ಟು ಮೊತ್ತವನ್ನು ಲೆಕ್ಕ ಹಾಕಬಹುದು ಎಂದರು. ಬಾಕಿ ಇರುವ ಬಿಲ್‌ಗಳನ್ನು ಆದಷ್ಟು ಬೇಗ ತೆರವುಗೊಳಿಸುವುದಾಗಿ ಬಿಸಿಸಿ ಅಧಿಕಾರಿಗಳು ಹೋಟೆಲ್ ಮತ್ತು ಲಾಡ್ಜ್ ಮಾಲೀಕರಿಗೆ ಭರವಸೆ ನೀಡಿದ್ದಾರೆ.

andolanait

Recent Posts

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

4 mins ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

15 mins ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

34 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

1 hour ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

1 hour ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

2 hours ago