ರಾಜ್ಯ

2022ರ ಬೆಳಗಾವಿ ಅಧಿವೇಶನ: ಇನ್ನೂ ಪಾವತಿಯಾಗಿಲ್ಲ ಶಾಸಕರು ಮತ್ತು ಸಚಿವರ ಹೋಟೆಲ್ ಬಿಲ್!

ಬೆಳಗಾವಿ: ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಶಾಸಕರು, ಅವರ ಸಿಬ್ಬಂದಿ ಮತ್ತು ಸರ್ಕಾರಿ ಅಧಿಕಾರಿಗಳಿಗೆ ವಸತಿ ಸೇವೆ ಒದಗಿಸಿದ್ದ ಹೋಟೆಲ್ ಮತ್ತು ಲಾಡ್ಜ್ ಮಾಲೀಕರ ಬಿಲ್‌ ತೆರವುಗೊಳಿಸಲು ಬೆಳಗಾವಿ ನಗರ ನಿಗಮ (ಬಿಸಿಸಿ) ಆಯುಕ್ತ ಅಶೋಕ್ ದುಗುಂಟಿ ಮುಂದಾಗಿದ್ದಾರೆ.

ಹೋಟೆಲ್ ಮತ್ತು ವಸತಿ ಮಾಲೀಕರನ್ನು ಭೇಟಿ ಮಾಡಿದ ಅವರು, ಬಿಲ್‌ಗಳನ್ನು ಪರಿಶೀಲಿಸಿದ ನಂತರ ಅವುಗಳನ್ನು ಜಿಲ್ಲಾಡಳಿತದ ಮುಂದೆ  ಇಡಲಾಗುವುದು, ನಂತರ ಅವುಗಳನ್ನು ಅನುಮೋದಿಸಲಾಗುವುದು ಎಂದು ಹೇಳಿದರು.

ಡಿಸೆಂಬರ್ 4 ರಿಂದ 15 ರ ನಡುವೆ ಸರ್ಕಾರವು ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಸಾಧ್ಯತೆಯಿದೆ. ನಗರಸಭೆ ಅಧಿಕಾರಿಗಳು ಈ ಹಿಂದೆ ಹೋಟೆಲ್ ಮತ್ತು ಲಾಡ್ಜ್ ಮಾಲೀಕರೊಂದಿಗೆ ಸಭೆ ನಡೆಸಿ, ಅಧಿವೇಶನಕ್ಕೆ ಹಾಜರಾಗುವ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಕೊಠಡಿಗಳನ್ನು ಕಾಯ್ದಿರಿಸುವಂತೆ ಕೇಳಿದರು. ಆದರೆ 2022 ರ ಚಳಿಗಾಲದ ಅಧಿವೇಶನದ ಬಿಲ್‌ಗಳು ಇನ್ನೂ ಬಾಕಿ ಉಳಿದಿವೆ ಎಂದು ಹೋಟೆಲ್ ಮಾಲೀಕರು ದೂರಿದ್ದಾರೆ.

ಬೆಳಗಾವಿ ಹೋಟೆಲ್ ಮಾಲೀಕರ ಸಂಘದ (ಬಿಎಚ್‌ಒಎ) ಅಧ್ಯಕ್ಷ ಅಜಯ್ ಪೈ ಮಾತನಾಡಿ, ಎಷ್ಟು ಹೋಟೆಲ್‌ಗಳು ಪಾವತಿಗಳನ್ನು ಸ್ವೀಕರಿಸಿವೆ ಮತ್ತು ಎಷ್ಟು ಬಾಕಿ ಉಳಿದಿವೆ ಎಂಬ ಎಲ್ಲಾ ವಿವರಗಳನ್ನು ಒಂದು ವಾರದೊಳಗೆ ಮಾಹಿತಿ ನೀಡುವಂತೆ ಆಯುಕ್ತರು ಸಂಘಕ್ಕೆ ಸೂಚಿಸಿದ್ದಾರೆ. ನಗರದಲ್ಲಿನ ಕೆಲವು ಪ್ರಮುಖ ಹೋಟೆಲ್‌ಗಳು ಇನ್ನೂ ಬಿಎಚ್‌ಒಎ ಸದಸ್ಯರಾಗಿ ನೋಂದಾಯಿಸಿಕೊಂಡಿಲ್ಲ ಎಂದು ಅವರು ಹೇಳಿದರು.

ಬೆಳಗಾವಿ ನಗರ ಪಾಲಿಕೆಗೆ ಮಾಹಿತಿ ಸಲ್ಲಿಸಲು, ಹಾಗೂ ಬಿಎಚ್ ಒ ಸದಸ್ಯತ್ವ ನೋಂದಣಿಗೆ ಸಮಯ ನೀಡಿದ್ದು ಒಂದು ವಾರದೊಳಗೆ ವಿವರಗಳನ್ನು ಸಲ್ಲಿಸಲು ತಿಳಿಸಿದ್ದೇವೆ.  ಒಂದು ವಾರದಲ್ಲಿ  ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ರವಾನಿಸಲಾಗುತ್ತದೆ. ಆ ಬಳಿಕವಷ್ಟೇ ಬಾಕಿ ಇರುವ  ಒಟ್ಟು ಮೊತ್ತವನ್ನು ಲೆಕ್ಕ ಹಾಕಬಹುದು ಎಂದರು. ಬಾಕಿ ಇರುವ ಬಿಲ್‌ಗಳನ್ನು ಆದಷ್ಟು ಬೇಗ ತೆರವುಗೊಳಿಸುವುದಾಗಿ ಬಿಸಿಸಿ ಅಧಿಕಾರಿಗಳು ಹೋಟೆಲ್ ಮತ್ತು ಲಾಡ್ಜ್ ಮಾಲೀಕರಿಗೆ ಭರವಸೆ ನೀಡಿದ್ದಾರೆ.

andolanait

Recent Posts

ಸೋನಮ್‌ ವಾಂಗ್ಚುಕ್‌ಗೆ ಅಗತ್ಯ ವೈದ್ಯಕೀಯ ನೆರವು ನೀಡುತ್ತೇವೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ ಮಾಹಿತಿ

ನವದೆಹಲಿ: ಜಂತರ್‌ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್ಚುಕ್‌ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ…

13 hours ago

ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದು

ನವದೆಹಲಿ: ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ…

14 hours ago

ಮಾಜಿ ಪ್ರಧಾನಿ ಎಚ್‌ಡಿಡಿ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರ: ವೈದ್ಯರ ಮಾಹಿತಿ

ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ ಎಂದು ಮಣಿಪಾಲ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ…

14 hours ago

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ ಫುಟ್‌ಪಾತ್‌ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…

22 hours ago

ಓದುಗರ ಪತ್ರ: ಕೆಪಿಎಸ್‌ಸಿ ಹಗರಣ; ಯುವಜನರ ಭವಿಷ್ಯಕ್ಕೆ ಕೊಳ್ಳಿ

ಕೆಪಿಎಸ್‌ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…

22 hours ago

ಓದುಗರ ಪತ್ರ: ಯಕ್ಷಪ್ರಶ್ನೆ

ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…

22 hours ago