ರಾಜ್ಯ

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ.

ಸುಮಾರು ಆರು ಸಾವಿರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಸುವರ್ಣ ಸೌಧದ ಸುತ್ತಮುತ್ತ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಅದೇ ಮಾದರಿಯಲ್ಲಿ ಬೇರೆಬೇರೆ ರಾಜ್ಯಗಳ ಪ್ರಮುಖ ಕೇಂದ್ರಗಳ ಮೇಲೆ ದಾಳಿ ನಡೆಯುವ ಮುನ್ಸೂಚನೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಬೆಳಗಾವಿಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿಯೇ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕವಾಗಿ ಶಮನವಾಗಿದ್ದರೂ, ಬೇಡಿಕೆ ಇನ್ನೂ ಪೂರ್ಣವಾಗಿ ಈಡೇರಿಲ್ಲ. ಹೀಗಾಗಿ ಬಾಗಲಕೋಟೆ ಹಾಗೂ ಇತರ ಜಿಲ್ಲೆಗಳ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ಮೆಕ್ಕೆಜೋಳ, ಹೆಸರು ಕಾಳು ಬೆಲೆ ಕುಸಿತ ವಾಗಿರುವುದು ರೈತರನ್ನು ಕಂಗಡಿಸಿದೆ. ಹೀಗಾಗಿ ಬೆಳೆಗಾರರು ಪ್ರತಿಭಟನೆ ನಡೆಸುವ ಅಂದಾಜಿದೆ.ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಎರಡುವರೆ ಲಕ್ಷ ಹುದ್ದೆಗಳ ನೇಮಕಾತಿಗಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇತ್ತೀಚೆಗೆ ಉದ್ಯೋಗ ಆಕಾಂಕ್ಷಿಗಳು ಹುಬ್ಬಳ್ಳಿ ಧಾರವಾಡದಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದರು. ಅದರ ಪರಿಣಾಮ ಮತ್ತೆ ಬೆಳಗಾವಿಯಲ್ಲಿಯೂ ಪ್ರತಿಭಟನೆಯಾಗುವ ಸಾಧ್ಯತೆ ಇದೆ. ಒಳ ಮೀಸಲಾತಿಯ ಗೊಂದಲಗಳು ಇನ್ನೂ ಜೀವಂತವಾಗಿವೆ, ಹೀಗಾಗಿ ಕೆಲವು ಪರಿಶಿಷ್ಟ ಸಮುದಾಯದ ಸಂಘಟನೆಗಳ ಪ್ರತಿಭಟನೆಯೂ ನಡೆಯಬಹುದಾಗಿದೆ.

ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿಗಳ ದಿನಗೂಲಿ ನೌಕರರು ವೇತನ ಪರಿಸ್ಕಾರಣೆ ವೇತನ ಪಾವತಿಯಂತಹ ಸಮಸ್ಯೆಗಳಿಗಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.ಈ ಹಿನ್ನೆಲೆಯಲ್ಲಿ ನಾಳೆಯಿಂದ ಬೆಳಗಾವಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು ಬಾರಿ ಬಂದೋಬಸ್ತ್ ಆಯೋಜಿಸಲಾಗಿದೆ. ಮಹಾರಾಷ್ಟ್ರ ಬೆಂಬಲಿತ ಸಂಘಟನೆಗಳು ಮತ್ತೊಮ್ಮೆ ತಗಾದೆ ತೆಗೆಯುವ ಆತಂಕವು ಇದೆ.

ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯಾಗಿಲ್ಲ ಎಂಬ ಕಾರಣಕ್ಕಾಗಿ ಪ್ರತ್ಯೇಕ ರಾಜ್ಯದ ಬೇಡಿಕೆಯು ಮತ್ತೆ ಮುನ್ನೆಲೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ತಮ್ಮ ಹಕ್ಕೋತಾಯಕ್ಕಾಗಿ ಬೀದಿಗೆ ಇಳಿಯುವ ನಿರೀಕ್ಷೆಯಿದೆ. ರಾಜ್ಯ ಸರ್ಕಾರ ಎಲ್ಲಾ ರೀತಿಯ ಭದ್ರತೆಗಳನ್ನು ಕೈಗೊಂಡಿದೆ. ಸಂಘಟನೆಗಳ ಪ್ರತಿಭಟನೆಗಳು ಒಂದೆಡೆಯಾದರೆ ಭಯೋತ್ಪಾದಕರ ದಾಳಿಯ ಮುನ್ನೆಚ್ಚರಿಕೆಯೂ ಭದ್ರತಾ ಸವಾಲನ್ನು ಹೆಚ್ಚಿಸಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಅಧಿಕಾರಿಗಳು ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago