ಬೆಳಗಾವಿ: ಇತ್ತೀಚೆಗೆ ರಾಜ್ಯದಲ್ಲಿ ಭ್ರೂಣ ಹತ್ಯೆಗಳು ಹೆಚ್ಚಾಗುತ್ತಿದ್ದು, ಮಂಡ್ಯದ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೆ ಬೆಳಗಾವಿ ಪಟ್ಟಣದ ತೋಟವೊಂದರಲ್ಲಿ ಭ್ರೂಣ ಹತ್ಯೆ ಪತ್ತೆಯಾಗಿದೆ.
ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ ಬೆಳಗಾವಿಯ ತಿಗಡೊಳ್ಳಿ ಗ್ರಾಮದಲ್ಲಿ ತೋಟವೊಂದನ್ನು ಲೀಸ್ಗೆ ಪಡೆದು ಭ್ರೂಣ ಹತ್ಯೆ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ.
ನಕಲಿ ವೈದ್ಯನ ಈ ಕೃತ್ಯದ ಬಗ್ಗೆ ಬೆಳಗಾವಿಯ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಮಾಹಿತಿ ಬಂದಿದ್ದು, ಜಿಲ್ಲಾಧಿಕಾರಿ ಅವರು ಪೊಲೀಸರು, ಆರೋಗ್ಯ ಇಲಾಖೆ ತಂಡ ಹಾಗೂ ಎಫ್ಎಸ್ಎಲ್ ತಂಡದವರಿಗೆ ಕಾರ್ಯಚರಣೆಗೆ ಸೂಚಿಸಿದ್ದರು. ಅದರಂತೆ ಭಾನುವಾರ ಕೈಗೊಂಡಿದ್ದ ಕಾರ್ಯಚರಣೆ ವೇಳೆ ಭ್ರೂಣ ಹತ್ಯೆ ಪತ್ತೆಯಾಗಿದ್ದು, ಇವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಪಟ್ಟಣದ ತನ್ನ ಕ್ಲಿನಿಕ್ನಲ್ಲಿ ಈ ನಕಲಿ ವೈದ್ಯ ಗರ್ಭಪಾತ ಮಾಡುತ್ತಿದ್ದ ಹಾಗೂ ಭ್ರೂಣಗಳನ್ನು ತಾನು ಲೀಸ್ ಪಡೆದ ಫಾರ್ಮ್ಹೌಸ್ನಲ್ಲಿ ಹೂಳುತ್ತಿದ್ದ. ಈ ಕುರಿತು ಮಾಹಿತಿ ಪಡೆದ ಪೊಲೀಸರು, ಆತನ ಸಹಾಯಕ ರೋಹಿತ್ ಕುಪ್ಪಸಗೌಡರ್ನನ್ನು ವಿಚಾರಣೆಗೆ ಒಳಪಡಿದ್ದರು. ಅವನು ನೀಡಿದ ಮಾಹಿತಿ ಆಧರಿಸಿ ಕಾರ್ಯಚರಣೆ ನಡೆಸಿದ್ದರು. ಪಟ್ಟಣದ ಕ್ಲಿನಿಕ್ನಲ್ಲಿ ಈ ಮೂರು ಭ್ರೂಣಗಳ ಹತ್ಯೆಯಾಗಿದ್ದವು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…